ನವದೆಹಲಿ: ಮಧ್ಯಪ್ರದೇಶದ ಸರ್ಕಾರಿ ಕಮಲಾ ನೆಹರು ಮಕ್ಕಳ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಕಳೆದ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಮಕ್ಕಳು ಮೃತಪಟ್ಟಿದ್ದಾರೆ.
ಅಗ್ನಿ ಅವಘಡ ಸಂಭವಿಸಿದಾಗ ಆಸ್ಪತ್ರೆಯಲ್ಲಿ 40 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದರು. ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಅಗ್ನಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಾಲ್ಕು ಮಕ್ಕಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಇದು ಅತ್ಯಂತ ನೋವಿನ ಸಂಗತಿ ಅಂತ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅಲ್ಲಿನ ಶಿಕ್ಷಣ ಸಚಿವ ವಿಶ್ವಾಸ್, ಬೆಂಕಿಬಿದ್ದ ವಾರ್ಡ್ನಲ್ಲಿ 40 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದರು. ದುರಾದೃಷ್ಟವಶಾತ್ 4 ಮಕ್ಕಳನ್ನ ರಕ್ಷಣೆ ಮಾಡಲು ಆಗಲಿಲ್ಲ. ಮೃತ ಮಕ್ಕಳ ಪೋಷಕರಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಪ್ರಕರಣದ ತನಿಖೆಗೆ ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
भोपाल के कमला नेहरू अस्पताल के चाइल्ड वार्ड में आग की घटना दुखद है। बचाव कार्य तेजी से हुआ। घटना की उच्चस्तरीय जांच के निर्देश दिए हैं। जांच एसीएस लोक स्वास्थ्य एवं चिकित्सा शिक्षा मोहम्मद सुलेमान करेंगे।
— Shivraj Singh Chouhan (@ChouhanShivraj) November 8, 2021