ಇಸ್ರೋ ಗಗನಯಾನ ಯೋಜನೆಯ ಸ್ಥಳಾಂತರಕ್ಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ
ಬೆಂಗಳೂರು: ಇಸ್ರೋ ಗಗನಯಾನ ಯೋಜನೆಯ ಸ್ಥಳಾಂತರಕ್ಕೆ ವಿರೋಧಿಸಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಭಟನಾ ಸ್ಥಳದಲ್ಲಿ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಯೋಜನೆ ಸ್ಥಳಾಂತರ ಮಾಡದಂತೆ ನಾನು ಪತ್ರ ಬರೆದಿದ್ದೇನೆ. ಪ್ರಧಾನಿ ನರೇಂದ್ರ ಮೋದಿ, ಸಿಎಂಗೆ ಪತ್ರ ಬರೆದಿದ್ದೇನೆ. ರಾಜ್ಯದ 25 ಸಂಸದರು ಹೋಗಿ ಪ್ರಧಾನಿ ಬಳಿ ಮಾತಾಡಿ. ರಾಜ್ಯದ ಗೌರವ ಹೋಗುವ ಕೆಲಸ ಆಗುವುದು ಬೇಡ. ರಾಜ್ಯದ ಗೌರವ ಕಾಪಾಡಿ ಅಂತ ಹೇಳಿದ್ದಾರೆ.
ಸುಮಾರು 25 ಸಾವಿರ ಜನರು ಕೆಲಸ ಮಾಡುತ್ತಿದ್ದಾರೆ. ಈ ಯೋಜನೆ ಕರ್ನಾಟಕದಲ್ಲಿ ಉಳಿಸಿಕೊಳ್ಳಲು ನಮ್ಮ ಹೋರಾಟ ಮುಂದುವರಿಯುತ್ತದೆ. ಇಡೀ ದಕ್ಷಿಣ ಭಾರತದ ವಿಜ್ಞಾನಿಗಳು ಇಲ್ಲಿಯೇ ಬಂದು ಕೆಲಸ ಮಾಡುತ್ತಿದ್ದಾರೆ. ದಕ್ಷಿಣ ಭಾರತದ ವಿದ್ಯಾರ್ಥಿಗಳನ್ನು ಉಳಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ನಾನೇ ಮುಂದಾಳತ್ವ ವಹಿಸಿಕೊಳ್ಳುತ್ತೇನೆ. ನಾವು ಬಂಧನಕ್ಕೆ ಹೆದರಲ್ಲ ಅಂತ ಡಿಕೆಶಿ ಅಭಿಪ್ರಾಯಪಟ್ಟರು.
ಪಿಎಂ, ಸಿಎಂಗೆ ಪತ್ರ ಬರೆದ ಡಿಕೆಶಿ
ಮಾನವಸಹಿತ ಗಗನಯಾನ ಕಾರ್ಯಕ್ರಮ ಸ್ಥಳಾಂತರ ವಿಚಾರಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಮಾನವಸಹಿತ ಗಗನಯಾನ ಕಾರ್ಯಕ್ರಮವು ಬೆಂಗಳೂರಿನಿಂದ ಗುಜರಾತ್ಗೆ ಸ್ಥಳಾಂತರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ