ಅಸಾದುದ್ದೀನ್ ಒವೈಸಿ
ದೆಹಲಿ: ಬಿಜೆಪಿಯ ಸಿದ್ಧಾಂತಗಳನ್ನು ಕಟುವಾಗಿ ವಿರೋಧಿಸುವವರಲ್ಲಿ ಒಬ್ಬರಾದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಇದೀಗ ತಮ್ಮ ಮೊದಲ ಗುರಿ ಏನೆಂಬುದನ್ನು ತಿಳಿಸಿದ್ದಾರೆ. ಟೈಮ್ಸ್ ನೌ ಮಾಧ್ಯಮದೊಂದಿಗೆ ಸಂದರ್ಶನದಲ್ಲಿ ಮಾತನಾಡಿದ ಓವೈಸಿ, ಉತ್ತರಪ್ರದೇಶದಲ್ಲಿ ಭಾರತೀಯ ಜನತಾ ಪಾರ್ಟಿ (BJP) ಇನ್ನೊಮ್ಮೆ ಅಧಿಕಾರಕ್ಕೆ ಬಾರದಂತೆ ತಡೆಯುವುದೇ ನಮ್ಮ ಮೊದಲ ಆದ್ಯತೆ ಎಂದು ಹೇಳಿದ್ದಾರೆ. ಹಾಗೇ, ಉತ್ತರ ಪ್ರದೇಶ ಚುನಾವಣೆ ನಿಮಿತ್ತ ಇನ್ಯಾವುದೇ ರಾಜಕೀಯ ಪಕ್ಷಗಳೊಂದಿಗೂ ಕೂಡ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಾವು 100 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದೇವೆ. ನಮ್ಮನ್ನು ಜನರು ಹೇಗೆ ಪರಿಗಣಿಸುತ್ತಾರೆ ಎಂಬುದನ್ನು ನೋಡಬೇಕು ಎಂದು ಹೇಳಿದ್ದಾರೆ.