ಪ್ರಾತಿನಿಧಿಕ ಚಿತ್ರ
ದೆಹಲಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣದಲ್ಲಿ ಕರ್ನಾಟಕ ಎಸ್ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸಿಡಿ ಪ್ರಕರಣದ ಬಗ್ಗೆ ತನಿಖೆಗೆ ರಚಿಸಿದ್ದ ಎಸ್ಐಟಿ ತನಿಖೆ ಪ್ರಶ್ನಿಸಿ, ವಿಶೇಷ ತನಿಖಾ ತಂಡ ರಚನೆ ಸರಿಯಿಲ್ಲವೆಂದು ಬಾಧಿತ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರಕರಣದಲ್ಲಿ ಎಸ್ಐಟಿ ಬಿ ರಿಪೋರ್ಟ್ ಸಲ್ಲಿಸಲು ಮುಂದಾಗಿತ್ತು. ಇದೀಗ ಸುಪ್ರೀಂ ತಡೆಯಾಜ್ಞೆಯಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಂಕಷ್ಟ ತಪ್ಪಿದ್ದಲ್ಲ ಎನ್ನುವಂತಾಗಿದೆ.