ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ನಿಗೂಢವಾಗಿ ಕಂದಮ್ಮಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಈ ಕೇಸ್ನ ತನಿಖೆಗೆ ಇಬ್ಬರು ಹಿರಿಯ ಅಧಿಕಾರಿಗಳನ್ನು ನೇಮಿಸಲಾಗಿದೆ.
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೂಚನೆ ಮೇರೆಗೆ ಪ್ರಕರಣದ ತನಿಖೆಗೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಬೆಳಗಾವಿ ಆರೋಗ್ಯ ಇಲಾಖೆಯ ವಿಭಾಗೀಯ ಜಂಟಿ ನಿರ್ದೇಶಕ ಡಾ.ಪ್ರಭು ಬಿರಾದಾರ ಮತ್ತು ಇನ್ನೋರ್ವ ಅಧಿಕಾರಿ ಡಾ.ಸಿದ್ದಲಿಂಗಯ್ಯ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಸಚಿವರು ಆದೇಶ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಸುಧಾಕರ್. ಬೆಳಗಾವಿ ಜಿಲ್ಲೆಯ ಬಿಮ್ಸ್ನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ 3 ಹಸುಗೂಸುಗಳು ನಿಗೂಢವಾಗಿ ಸಾವನ್ನಪ್ಪಿವೆ. ಪ್ರಕರಣ ಸಂಬಂಧ ಇಬ್ಬರು ಅಧಿಕಾರಿಗಳನ್ನ ಸಸ್ಪೆಂಡ್ ಮಾಡಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.