ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಮ್ಮನ್ನ ಅಗಲಿ ಇಂದಿಗೆ ಒಂದು ವಾರ. ಆದರೂ ಅವರ ನೆನಪು ಮಾತ್ರ ಇಂದಿಗೂ ಇದೆ. ಈಗ ಅಪ್ಪು ನೆನಪಿಗೋಸ್ಕರ ದಾವಣಗೆರೆ ಸಿದ್ದಗಂಗಾ ಶಾಲಾ ವಿದ್ಯಾರ್ಥಿಗಳು ಭಾವಚಿತ್ರ ಬಿಡಿಸಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪುನೀತ್ ಚಿತ್ರ ಬಿಡಿಸಿದ ವಿದ್ಯಾರ್ಥಿಗಳು ಅವರ ಸಾಧನೆಯನ್ನೂ ಬಣ್ಣಿಸಿದ್ದಾರೆ. ತಮ್ಮ ಕೈ ಚಳಕದಿಂದ ಸುಂದರ ಚಿತ್ರ ಬಿಡಿಸಿದ ವಿದ್ಯಾರ್ಥಿಗಳು ಈ ಮೂಲಕ ಅಭಿಮಾನದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಈ ವಿಶೇಷ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು ವಿದ್ಯಾರ್ಥಿಗಳ ಕಲೆಗೆ ಮೆಚ್ಚುಗೆ ವ್ಯಕ್ತವಾಗಿದೆ.