ಕಲಿಕಾ ಕೊಠಡಿ ಕೊಡಿಸಿ ಕನ್ನಡ ಶಾಲೆ ಉಳಿಸಿ..ಸಚಿವ ಆಚಾರ್​ಗೆ ಮಕ್ಕಳಿಂದ ಘೇರಾವ್​


ಕೊಪ್ಪಳ: ವಿದ್ಯಾರ್ಥಿಗಳಿಗೆ ಕಲಿಕಾ ಕೊಠಡಿಗಳನ್ನು ನೀಡಿ ಕನ್ನಡ ಶಾಲೆಗಳನ್ನು ಉಳಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಗೆ ಪಾಲಕರು ಮತ್ತು ವಿದ್ಯಾರ್ಥಿಗಳು ಘೇರಾವ್​ ಹಾಕಿದ್ದಾರೆ.

ಕೊಪ್ಪಳದ ಸರ್ಕಾರಿ ಶಾಸಕರ ಮಾದರಿ ಶಾಲೆ ಉಳಿಸಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಪಾಲಕರು ವಿದ್ಯಾರ್ಥಿಗಳಿಗೆ ಕೊಠಡಿಗಳನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ. ಶಾಲೆಯಲ್ಲಿ ಸುಮಾರು 350 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು ಕೊಠಡಿಗಳ ಅಭಾವವಿದೆ. ಆದ್ದರಿಂದ ಈ ಹಿಂದೆ ಕೇಂದ್ರಿಯ ವಿಶ್ವವಿದ್ಯಾಲಯಕ್ಕೆ ನೀಡಿದ ಕೊಠಡಿಗಳನ್ನು ನೀಡುವಂತೆ ಪಾಲಕರು ಮತ್ತು ವಿದ್ಯಾರ್ಥಿಗಳು  ಮನವಿ ಮಾಡಿದ್ದಾರೆ.

ಸದ್ಯ ಕೇಂದ್ರಿಯ ವಿದ್ಯಾಲಯವು ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದು  ಆ ಕೊಠಡಿಗಳನ್ನು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪಿಜಿ ಸೆಂಟರ್​ಗೆ ನೀಡಲಾಗಿದೆ. ಇದರಿಂದ ಕೆರಳಿದ ವಿದ್ಯಾರ್ಥಿಗಳು ಪಾಲಕರ ಜೊತೆಗೂಡಿ ಸಚಿವರಿಗೆ ಘೇರಾವ್ ಹಾಕಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

News First Live Kannada


Leave a Reply

Your email address will not be published. Required fields are marked *