ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಕಳೆದ ಒಂದು ವರ್ಷದಿಂದ ವಿವಾದದಲ್ಲಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಘೋಷಿಸಿದರು. ಮೋದಿ ಈ ಘೋಷಣೆ ಬೆನ್ನಲ್ಲೇ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ಮತ್ತು ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್, ತಾವು ಪ್ರತಿಭಟನೆಯನ್ನ ಹಿಂಪಡೆಯುವುದಿಲ್ಲ ಎಂದಿದ್ದಾರೆ.
ಈ ಆಂದೋಲನವನ್ನು ತಕ್ಷಣವೇ ಹಿಂಪಡೆಯುವುದಿಲ್ಲ. ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ರದ್ದುಪಡಿಸುವ ದಿನಕ್ಕಾಗಿ ನಾವು ಕಾಯುತ್ತೇವೆ. ಎಂಎಸ್ಪಿ ಜತೆಗೆ ರೈತರ ಇತರೆ ಸಮಸ್ಯೆಗಳನ್ನೂ ಕೇಂದ್ರ ಸರ್ಕಾರ ಚರ್ಚಿಸಬೇಕು ಎಂದು ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ.
आंदोलन तत्काल वापस नहीं होगा, हम उस दिन का इंतजार करेंगे जब कृषि कानूनों को संसद में रद्द किया जाएगा ।
सरकार MSP के साथ-साथ किसानों के दूसरे मुद्दों पर भी बातचीत करें : @RakeshTikaitBKU#FarmersProtest
— Rakesh Tikait (@RakeshTikaitBKU) November 19, 2021
ಮೋದಿ ಸರ್ಕಾರ 2020 ಜೂನ್ 5 ರಂದು ಈ ಮೂರು ಕೃಷಿ ಕಾಯ್ದೆಯನ್ನ ಜಾರಿಗೆ ತಂದಿತ್ತು. ಇದಕ್ಕೆ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗಿತ್ತು. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ್ ರಾಜ್ಯಗಳಲ್ಲಿ ಭಾರೀ ಪ್ರತಿಭಟನೆಗಳು ನಡೆದಿದ್ದವು. 2020 ನವೆಂಬರ್ನಿಂದ ಇಂದಿನವರೆಗೂ ರೈತರ ದೆಹಲಿಯ ವಿವಿಧ ಗಡಿಯಲ್ಲಿ ನಿರಂತರವಾಗಿ ಪ್ರತಿಭಟನೆ ಮಾಡುತ್ತ ಬಂದಿದ್ದರು. ಅಲ್ಲಿಂದ ಇಂದಿನವರೆಗೂ ರಾಕೇಶ್ ಟಿಕಾಯತ್ ನೇತೃತ್ವದ ರೈತ ಸಂಘಟನೆ ಪ್ರತಿಭಟನೆಯನ್ನ ಮಾಡುತ್ತಲೇ ಬಂದಿದೆ.