ಕೆಲವ್ರು ಪಕ್ಷಕ್ಕೆ ಬರೋರಿದ್ದಾರೆ, ಬೇಡ ಅನ್ನಲ್ಲ -ಬಿಜೆಪಿ ನಿದ್ದೆಗೆಡಿಸಿದ DKS​ ಈ ಹೇಳಿಕೆ


ಕೆಲವ್ರು ಪಕ್ಷಕ್ಕೆ ಬರೋರಿದ್ದಾರೆ, ಬೇಡ ಅನ್ನಲ್ಲ -ಬಿಜೆಪಿ ನಿದ್ದೆಗೆಡಿಸಿದ ಡಿಕೆಎಸ್​ ಈ ಹೇಳಿಕೆ
ಕೆಲವರು ಪಕ್ಷಕ್ಕೆ ಬರುವವರು ಇದ್ದಾರೆ, ನಾನು ಬೇಡ ಅನ್ನುವುದಿಲ್ಲ. ಕೆಲವರು ನನಗೆ ಆಗದೇ ಇರಬಹುದು. ಕೆಲವರು ಬೇರೆಯವರಿಗೆ ಆಗದೇ ಇರಬಹುದು. ಆದರೆ ಇದೆಲ್ಲ ವೈಯುಕ್ತಿಕವಾಗಿಲ್ಲ, ಪಾರ್ಟಿ ಅಂತ ನೋಡುತ್ತೇವೆ.
ಡಿ.ಕೆ.ಶಿವಕುಮಾರ್​, ಕೆಪಿಸಿಸಿ ಅಧ್ಯಕ್ಷ

ಕೆಪಿಸಿಸಿ ಅಧ್ಯಕ್ಷರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜೊತೆಗೆ ರಾಜಕೀಯ ಶತ್ರುಗಳು ಪರಸ್ಪರ ಒಂದಾಗುತ್ತಿದ್ದಾರಾ ಅನ್ನೋ ಪ್ರಶ್ನೆಗಳು ಸಹ ಹುಟ್ಟಿಕೊಂಡಿವೆ. ಅವರು ಬೇರೆ ಯಾರೂ ಅಲ್ಲ, ಮಾಜಿ ಮಿನಿಸ್ಟರ್, ಬಿಜೆಪಿ ಹಿರಿಯ ನಾಯಕ ಸಿ.ಪಿ.ಯೋಗೇಶ್ವರ್!

ಹೆಚ್​ಡಿಕೆ ಕಟ್ಟಿಹಾಕಲು ಪ್ಲಾನ್
ಡಿ.ಕೆ ಶಿವಕುಮಾರ್ ಹಾಗೂ ಸಿ.ಪಿ.ಯೋಗೇಶ್ವರ್ ಹಾವು ಮುಂಗೂಸಿಯಂತೆ ಕಿತ್ತಾಡಿದ್ದು ಗೊತ್ತಿರುವ ವಿಚಾರವೇ. ಇದೀಗ ಇವರಿಬ್ಬರು ಮತ್ತೆ ಒಂದಾಗುತ್ತಿದ್ದಾರೆ ಅನ್ನೋ ಗುಸುಗುಸು ರಾಜಕೀಯ ವಲಯದಲ್ಲಿ ಶುರುವಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿಯನ್ನ ಕಟ್ಟಿಹಾಕಲು ಡಿಕೆಎಸ್​, ಸಿಪಿವೈ ಒಂದಾಗುತ್ತಾರೆ. ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್ ಬಗ್ಗು ಬಡಿಯಲು ಒಂದಾಗುತ್ತಾರಂತೆ ಅನ್ನೋ ಚರ್ಚೆ ಜೋರಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಿಪಿವೈಯನ್ನ ಬಿಜೆಪಿಯಿಂದ ಸೆಳೆಯಲು ಡಿಕೆ ಶಿವಕುಮಾರ್​ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

ಇದರ ಮುಂದುವರಿದ ಭಾಗವಾಗಿ ಡಿಕೆಎಸ್ ಹಾಗೂ ಡಿ.ಕೆ.ಸುರೇಶ್​ ಸಿ.ಪಿ.ಯೋಗೇಶ್ವರ್​​ ಅವರನ್ನ ಭೇಟಿಯಾಗಿದ್ದಾರಂತೆ. ಈ ಬಗ್ಗೆ ಮಾತುಕತೆ ಕೂಡ ನಡೆದಿದೆ ಅಂತಾ ಮೂಲಗಳು ಹೇಳಿವೆ. ಅಲ್ಲದೇ ಕಾಂಗ್ರೆಸ್​ ಸೇರಲು ಖುದ್ದು ಸಿಪಿ ಯೋಗೇಶ್ವರ್ ಅವರೇ ಉತ್ಸುಕರಾಗಿದ್ದಾರೆ. ಬಿಜೆಪಿಯಲ್ಲಿನ ಇತ್ತೀಚೆಗಿನ ಬೆಳವಣಿಗೆಗಳಿಂದ ಕಾಂಗ್ರೆಸ್ ಸೇರಲಿದ್ದಾರೆ. ಯಾಕಂದ್ರೆ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನದ ನಿರೀಕ್ಷೆ ಹೊಂದಿದ್ದ ಸಿಪಿವೈಗೆ ಭಾರೀ ನಿರಾಸೆ ಆಗಿದೆ. ಹೀಗಾಗಿ ಕಾಂಗ್ರೆಸ್​ ಕೈಹಿಡಿದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೈಅಭ್ಯರ್ಥಿಯಾಗಿ ಚನ್ನಪಟ್ಟಣದಿಂದ ಕಣಕ್ಕಿಳಿಯಲಿದ್ದಾರೆಂಬ ಮಾತುಗಳು ಕೇಳಿಬಂದಿವೆ.

News First Live Kannada


Leave a Reply

Your email address will not be published. Required fields are marked *