ಭಾನುವಾರ ರಾತ್ರಿ 10.30ಕ್ಕೆ ಅವರಿಗೆ ತೀವ್ರ ಹೃದಯಾಘಾತವಾಗಿದೆ ಎಂದು ಬನಾರಸ್ ಬಾರ್ ಅಸೋಸಿಯೇಷನ್ ನ ಹಿರಿಯ ವಕೀಲ ನಿತ್ಯಾನಂದ ರಾಯ್ ಹೇಳಿದ್ದಾರೆ. ಯಾದವ್ ಅವರನ್ನು ತಕ್ಷಣವೇ ತ್ರಿಮೂರ್ತಿ ಆಸ್ಪತ್ರೆಗೆ ದಾಖಲಿಸಿದ್ದು, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಅಭಯ.ನಾಥ್ ಯಾದವ್
ದೆಹಲಿ: ಜ್ಞಾನವಾಪಿ ಪ್ರಕರಣದಲ್ಲಿ(Gyanvapi case) ಅಂಜುಮಾನ್ ಇಂತೆಜಾಮಿಯಾ ಮಸ್ಜಿದ್ ಸಮಿತಿಯ ( Anjuman Intezamia Masjid Committee) ಪರ ವಾದಿಸಿದ್ದ ಹಿರಿಯ ವಕೀಲ ಅಭಯ್ ನಾಥ್ ಯಾದವ್ (Abhay Nath Yadav) ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ವರದಿಗಳ ಪ್ರಕಾರ ಭಾನುವಾರ ಅವರನ್ನು ವಾರಣಾಸಿಯಲ್ಲಿರುವ ಮಕ್ಭೂಲ್ ಅಲಾಂ ರೋಡ್ ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ರಾತ್ರಿ 10.30ಕ್ಕೆ ಅವರಿಗೆ ತೀವ್ರ ಹೃದಯಾಘಾತವಾಗಿದೆ ಎಂದು ಬನಾರಸ್ ಬಾರ್ ಅಸೋಸಿಯೇಷನ್ ನ ಹಿರಿಯ ವಕೀಲ ನಿತ್ಯಾನಂದ ರಾಯ್ ಹೇಳಿದ್ದಾರೆ. ಯಾದವ್ ಅವರನ್ನು ತಕ್ಷಣವೇ ತ್ರಿಮೂರ್ತಿ ಆಸ್ಪತ್ರೆಗೆ ದಾಖಲಿಸಿದ್ದು, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಆಮೇಲೆ ಅವರ ಕುಟುಂಬದ ಸದಸ್ಯರು ಶುಭಂ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿನ ವೈದ್ಯರು ಯಾದವ್ ಮೃತಪಟ್ಟಿದ್ದಾರೆ ಎಂದು ದೃಢೀಕರಿಸಿದ್ದಾರೆ.