ಕೊಪ್ಪಳ: ಬಿಟ್ ಕಾಯಿನ್ ವಿಚಾರವಾಗಿ ಬಿಜೆಪಿಗೆ ತಿರುಗೇಟು ನೀಡಿದ್ದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ಕೆ.ಎಸ್ ಈಶ್ವರಪ್ಪ, ಬಿಟ್ ಕಾಯಿನ್ ಬಗ್ಗೆ ಕಾಂಗ್ರೆಸ್ ನಾಯಕರು ಸ್ಪರ್ಧಾತ್ಮಕವಾಗಿ ಮಾತಾಡ್ತಿದ್ದಾರೆ. ಇಷ್ಟು ದಿನ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಾತನಾಡುತ್ತಿದ್ದರು. ಈಗ ಈ ಸಾಲಿಗೆ ಪ್ರಿಯಾಂಕ್ ಖರ್ಗೆ ಸೇರ್ಪಡೆ ಆಗಿದ್ದಾರೆ. ಯಾರೂ ಕೂಡ ಒಂದು ಪೀಸ್ ಕಾಗದದ ದಾಖಲೆ ಕೊಡ್ತಿಲ್ಲ ಎಂದರು.
ಹೀಗೆ ದಾಖಲೆ ಇಲ್ಲದ ಹೇಳಿಕೆ ಕೊಡುವುದು ಕಾಂಗ್ರೆಸ್ಗೆ ಚಾಳಿಯಾಗಿ ಬಿಟ್ಟಿದೆ ಅಂತ ವಾಗ್ದಾಳಿ ನಡೆಸಿದ್ದಾರೆ. ಬಿಟ್ ಕಾಯಿನ್ ಹಗರಣದಲ್ಲಿ ಐಎಎಸ್ ಅಧಿಕಾರಿಗಳೂ ಇದ್ದಾರೆ ಅಂತಾ ಹೇಳ್ತಾರೆ. ತಾಕತ್ತು ಇದ್ರೆ ಆ ಎಲ್ಲ ದಾಖಲೆ ಬಿಡುಗಡೆ ಮಾಡಲಿ ಅಂತಾ ಈಶ್ವರಪ್ಪ ಸವಾಲು ಹಾಕಿದ್ದಾರೆ..
ಇದನ್ನೂ ಓದಿ: ಬಿಟ್ ಕಾಯಿನ್ ಹಗರಣದಲ್ಲಿ CM ಬೊಮ್ಮಾಯಿ ಬಲಿ ಪಡಿಯೋದು 100% ಗ್ಯಾರೆಂಟಿ -ಪ್ರಿಯಾಂಕ್ ಖರ್ಗೆ