ಬೆಂಗಳೂರು: ಕೊರೊನಾ ಸೋಂಕಿಗೆ ತುತ್ತಾಗಿ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು, ಆದಷ್ಟು ಬೇಗ ಕೊರೊನಾದಿಂದ ಗುಣಮುಖರಾಗಲಿ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಟಿ.ಎ.ಶರವಣ ಪ್ರಾರ್ಥಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಅವರು, ‘ಮಾಜಿ ಪ್ರಧಾನಿಗಳು ಹಾಗೂ ನಮ್ಮ ಪಕ್ಷದ ಸರ್ವೋಚ್ಛ ನಾಯಕರಾದ ಹೆಚ್.ಡಿ.ದೇವೇಗೌಡರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಅತ್ಯಂತ ವಿಷಾದಕರ ಸಂಗತಿಯಾಗಿದೆ. ತಮ್ಮ ಜೀವನವಿಡೀ ಅನೇಕ ಹೋರಾಟಗಳನ್ನು ಯಶಸ್ವಿಯಾಗಿ ಮುನ್ನೆಡಿಸಿ ಗೆದ್ದಿರುವ ಅವರು ಕೊರೊನಾ ವಿರುದ್ಧ ಯಶಸ್ವಿಯಾಗಿ ಹೋರಾಡಿ ಗೆದ್ದುಬರಲೆಂದು ಪ್ರಾರ್ಥಿಸುವೆ ಎಂದು ಟ್ವೀಟ್ ಮಾಡಿದ್ದಾರೆ.
*ಮಾಜಿ ಪ್ರಧಾನಿಗಳು ನಮ್ಮ ಪಕ್ಷದ ಸರ್ವೋಚ್ಚ ನಾಯಕರಾದ ಶ್ರೀ ಹೆಚ್.ಡಿ ದೇವಗೌಡರಿಗೆ @H_D_Devegowda ಕೊರೋನಾ ಸೋಂಕು ಧೃಡವಾಗಿದ್ದು, ಅತ್ಯಂತ ವಿಷಾದಕರ ಸಂಗತಿಯಾಗಿದೆ.*
*ತಮ್ಮ ಜೀವನವಿಡೀ ಅನೇಕ ಹೋರಾಟಗಳನ್ನು ಯಶಸ್ವಿಯಾಗಿ ಮುನ್ನೆಡಿಸಿ ಗೆದ್ದಿರುವ ಗೌಡರು ಕೊರೋನಾ ವಿರುದ್ಧ ಯಶಸ್ವಿಯಾಗಿ ಹೋರಾಡಿ ಗೆದ್ದು ಬರಲೆಂದು ಪ್ರಾರ್ಥಿಸುವೆ. pic.twitter.com/etf4XhDuo1— Sharavana TA (@SharavanaTa) January 22, 2022