ನಮ್ಮ ಆಟಗಾರರನ್ನ ಅಷ್ಟೊಂದು ಕಟುವಾಗಿ ಟೀಕಿಸಬೇಡಿ -ಹರ್ಭಜನ್​ ಸಿಂಗ್ ಮನವಿ


ಟಿ-20 ವಿಶ್ವಕಪ್​​ ಟೂರ್ನಿಯ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಸೋಲುಕಂಡಿದೆ. ಈ ಮೂಲಕ ಸೆಮಿಫೈನಲ್ ತಲುಪುವ ಅವಕಾಶ ಬಹುತೇಕ ಕೊನೆಗೊಂಡಿದೆ.

ಭಾರತದ ಕಳಪೆ ಪ್ರದರ್ಶನಕ್ಕೆ ಟೀಕೆಗಳು ಕೇಳಿಬರುತ್ತಿದೆ. ಟೀಮ್ ಇಂಡಿಯಾದ ಬ್ಯಾಟ್ಸ್​​ಮನ್​​ಗಳ ಪ್ರದರ್ಶನದ ವಿರುದ್ಧ ಮಾಜಿ ಕ್ರಿಕೆಟಿಗರು ಅಸಮಾಧಾನ ಹೊರಹಾಕಿದ್ದಾರೆ. ಆದರೆ ಇನ್ನೊಂದೆಡೆ ಮಾಜಿ ಕ್ರಿಕೆಟಿಗ ಹರ್ಭಜನ್​ ಸಿಂಗ್ ಟೀಮ್ ಇಂಡಿಯಾದ ಆಟಗಾರರನ್ನ ಅಷ್ಟೊಂದು ಕಟುವಾಗಿ ಟೀಕಿಸಬೇಡಿ ಎಂದು ಕ್ರಿಕೆಟ್ ಪ್ರೇಮಿಗಳಲ್ಲಿ ಮನವಿ ಮಾಡಿದ್ದಾರೆ.

ಉತ್ತಮ ಕ್ರಿಕೆಟ್​ ತಂಡ ಎಂದು ನಾನು ತಿಳಿದಿದ್ದೆವು, ಇದು ಹಲವು ಬಾರಿ ಅದು ಸಾಬೀತಾಗಿದೆ. ಈ ರೀತಿಯ ಫಲಿತಾಂಶದಿಂದಾಗಿ ಆಟಗಾರರಿಗೆ ಅತೀವ ನೋವಾಗಿರುತ್ತದೆ. ಆದರೆ ನ್ಯೂಜಿಲೆಂಡ್ ತಂಡ ಉತ್ತಮ ಆಟ ಪ್ರದರ್ಶಿಸಿದೆ. ಅವರು ಎಲ್ಲಾ ವಿಭಾಗದಲ್ಲೂ ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

News First Live Kannada


Leave a Reply

Your email address will not be published. Required fields are marked *