ಮೈಸೂರು: ರಾಜ್ಯದಲ್ಲಿ ವಿಧಿಸಿರುವ ನೈಟ್ ಕರ್ಫ್ಯೂವನ್ನು ಕೂಡಲೇ ತೆರವು ಮಾಡಿ ಎಂದು ಸಂಸದ ಪ್ರತಾಪ್ ಸಿಂಹ ಗರಂ ಆಗಿದ್ದಾರೆ.
ಈ ಕುರಿತು ನಗರದಲ್ಲಿ ಮಾತನಾಡಿದ ಅವರು ಲಾಕ್ ಡೌನ್, ಕರ್ಫ್ಯೂಗಳಂತ ಅಸ್ತ್ರಗಳನ್ನು ಪ್ರಯೋಗಿಸುವುದಾದರೆ ವ್ಯಾಕ್ಸಿನ್ ಯಾಕೆ ಬೇಕಿತ್ತು.? ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ, ಅಲ್ಲಿ ಪ್ರಚಾರ,ಱಲಿ ನಡೆಯುತ್ತದೆ ತಾನೇ.? ಹೀಗಿರುವಾಗ ಕರ್ನಾಟಕದಲ್ಲಿ ಯಾಕೆ ಕರ್ಫ್ಯೂ ವಿಧಿಸಿ ಜನರನ್ನು ಕಂಗಾಲು ಮಾಡ್ತಿದ್ದಿರಿ ಎಂದು ಪ್ರತಾಪ್ ಸಿಂಹ ಸ್ವಪಕ್ಷೀಯ ಸರರ್ಕಾರದ ವಿರುದ್ಧವೆ ಕಿಡಿಕಾರಿದ್ದಾರೆ.
ಕರ್ಫ್ಯೂ, ಲಾಕ್ ಡೌನ್ ನಿಂದ ಜನರಿಗೆ ಬಹಳ ತೊಂದರೆಯಾಗಿದೆ. ಜನರಿಗೆ ಜೀವನ, ಜೀವ ಎರಡು ಮುಖ್ಯ. ಜೀವ ಉಳಿಸಿ ಕೊಳ್ಳಲು ವ್ಯಾಕ್ಸಿನ್ ಕೊಟ್ಟಿದ್ದೇವೆ. ಈಗ ಜೀವನ ಉಳಿಯ ಬೇಕಾದರೆ ಕರ್ಫ್ಯೂ, ತೆಗೆಯಿರಿ. ಸಿಎಂ ಈ ಬಗ್ಗೆ ಶುಕ್ರವಾರದ ಸಭೆಯಲ್ಲಿ ಒಳ್ಳೆಯ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದು ಪ್ರತಾಪ್ ಸಿಂಹ ಭರವಸೆ ವ್ಯಕ್ತಪಡಿಸಿದ್ದಾರೆ.