
I am very happy to Expulsion from JDS said Gubbi MLA SR Srinivas
ನನ್ನ ವಿರುದ್ಧ ಅಭ್ಯರ್ಥಿ ಘೋಷಿಸಿದಾಗಲೇ ನಾನು ಉಚ್ಚಾಟಿತನಾಗಿದ್ದೆ. ಡಿಸೆಂಬರ್ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಕೊಟ್ಟು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ತುಮಕೂರು: ನಿನ್ನೆ (ಜೂನ್ 22) ನಡೆದ ಕೋರ್ ಕಮಿಟಿ ಸಭೆಯಲ್ಲಿ ಗುಬ್ಬಿ ಶ್ರೀನಿವಾಸ್ ಮತ್ತು ಕೋಲಾರ ಶ್ರೀನಿವಾಸ ಗೌಡ ಅವರನ್ನು ಉಚ್ಚಾಟನೆ ಮಾಡಿ ಜೆಡಿಎಸ್ (JDS) ಆದೇಶ ನೀಡಿದೆ. ಈ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗುಬ್ಬಿ ಜೆಡಿಎಸ್ ಶಾಸಕ ಎಸ್ಆರ್ ಶ್ರೀನಿವಾಸ್ (SR Srinivas), ಜೆಡಿಎಸ್ನಿಂದ ಉಚ್ಚಾಟನೆ ಮಾಡಿದ್ದರಲ್ಲಿ ಹೊಸದೇನಿಲ್ಲ. ಪಕ್ಷದಿಂದ ಉಚ್ಚಾಟನೆ ಮಾಡಿದ್ದು ನನಗೆ ಸಂತೋಷವಾಗಿದೆ. ಈ ಬೆಳವಣಿಗೆ ಮುಜುಗರ, ಅವಮಾನ ಎಂದು ಅನಿಸಲ್ಲ. ನನ್ನ ವಿರುದ್ಧ ಅಭ್ಯರ್ಥಿ ಘೋಷಿಸಿದಾಗಲೇ ನಾನು ಉಚ್ಚಾಟಿತನಾಗಿದ್ದೆ. ಡಿಸೆಂಬರ್ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಕೊಟ್ಟು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.