ವಕ್ಫ್ ಮಂಡಳಿ ಚುನಾಣಾ ಪ್ರಕ್ರಿಯೆ ಇರುವ ವ್ಯವಸ್ಥೆ. ವಕ್ಫ್ ಮಂಡಳಿಗೆ ನಮ್ಮ ಕಡೆಯಿಂದ 50% ಜನ ವಿರೋಧ ಪಕ್ಷದಿಂದ 50% ಜನ ಕೊಡಬೇಕು ಎಂಬ ತೀರ್ಮಾನ ಆಗಿತ್ತು.

ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ
ಕಾರವಾರ: ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ (Paresh Mesta) ಪ್ರಕರಣದ ಎ1 ಆರೋಪಿಗೆ ಜಿಲ್ಲಾ ವಕ್ಫ್ ಮಂಡಳಿ ಉಪಾಧ್ಯಕ್ಷ ಹುದ್ದೆ ನೀಡಿದ್ದ ಹಿನ್ನೆಲೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದು, ವಕ್ಫ್ ಮಂಡಳಿ ಚುನಾಣಾ ಪ್ರಕ್ರಿಯೆ ಇರುವ ವ್ಯವಸ್ಥೆ. ವಕ್ಫ್ ಮಂಡಳಿಗೆ ನಮ್ಮ ಕಡೆಯಿಂದ 50% ಜನ ವಿರೋಧ ಪಕ್ಷದಿಂದ 50% ಜನ ಕೊಡಬೇಕು ಎಂಬ ತೀರ್ಮಾನ ಆಗಿತ್ತು. ನಾವು ಕೊಟ್ಟಿರುವ ಪಟ್ಟಿ ಸರಿ ಇದೆ. ವಿರೋಧ ಪಕ್ಷದವರು ಕೊಟ್ಟ ಪಟ್ಟಿಯಲ್ಲಿ ಅಣ್ಣಿಗೇರಿ ಇದ್ದರು. ಇದು ಸರಿಯಲ್ಲ ಎಂದು ನಾನು ಹೇಳಿದಾಗ ಈ ಪಟ್ಟಿಯನ್ನು ರದ್ದು ಮಾಡಿದ್ದಾರೆ. ನಮಗೆ ಬಹುಮತ ಇಲ್ಲದ ಕ್ಷೇತ್ರ ಅದು. ಮುಂದೆ ಹೆಚ್ಚಿನ ಮಾಹಿತಿ ಕೊಡುತ್ತೇವೆ ಎಂದು ಹೇಳಿದರು.