ಪುನೀತ್​ಗೆ ಪದ್ಮಶ್ರೀ, ಡಾ. ರಾಜ್​ಕುಮಾರ್‌ಗೆ​ ಭಾರತ ರತ್ನ ಗೌರವ ನೀಡಬೇಕು: ಎಂಪಿ ರೇಣುಕಾಚಾರ್ಯ ಹೇಳಿಕೆ | BJP MLA on Puneeth Rajkumar Dr Rajkumar Program to be held in Davanagere details here


ಪುನೀತ್​ಗೆ ಪದ್ಮಶ್ರೀ, ಡಾ. ರಾಜ್​ಕುಮಾರ್‌ಗೆ​ ಭಾರತ ರತ್ನ ಗೌರವ ನೀಡಬೇಕು: ಎಂಪಿ ರೇಣುಕಾಚಾರ್ಯ ಹೇಳಿಕೆ

ಎಂ.ಪಿ. ರೇಣುಕಾಚಾರ್ಯ (ಸಂಗ್ರಹ ಚಿತ್ರ)

ಬೆಂಗಳೂರು: ಕರ್ನಾಟಕದ ಜನರಿಂದ ದೀಪಾವಳಿ ಆಚರಣೆ ಬದಲು ಪುನೀತ್ ರಾಜ್​ಕುಮಾರ್ ಸಮಾಧಿ ದರ್ಶನ ಮಾಡಲಾಗಿದೆ. ಜನರು ಈಗಲೂ ಸಾಗರೋಪಾದಿಯಲ್ಲಿ ಬಂದು ಪುನೀತ್ ಸಮಾಧಿ ದರ್ಶನ ಪಡೆಯುತ್ತಿದ್ದಾರೆ ಎಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ನಟ ಪುನೀತ್​ ಮನೆ ಬಳಿ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಇಂದು (ನವೆಂಬರ್ 7) ಹೇಳಿಕೆ ನೀಡಿದ್ದಾರೆ.

ಪುನೀತ್ ರಾಜ್​ಕುಮಾರ್ ಪ್ರಚಾರವಿಲ್ಲದೆ ಸೇವೆ ಮಾಡಿದ್ದಾರೆ. ನಾನು ಶಕ್ತಿಧಾಮಕ್ಕೆ ನೆರವು ನೀಡುವ ಬಗ್ಗೆ ಅಶ್ವಿನಿ ಜತೆ ಮಾತಾಡಿದ್ದೇನೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ನುಡಿನಮನ ಆಯೋಜಿಸಿರುವೆ. ಗಾಯಕ ರಾಜೇಶ್ ಕೃಷ್ಣನ್​ರಿಂದ ನುಡಿನಮನ ಕಾರ್ಯಕ್ರಮ ನಡೆಯಲಿದೆ. 10 ಸಾವಿರ ಜನರು ಸೇರಿ ಪುನೀತ್​​ಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ. ನೇತ್ರದಾನ ಬಗ್ಗೆ ನಮ್ಮ ಕುಟುಂಬಸ್ಥರು ಅಭಿಯಾನ ಮಾಡುತ್ತೇವೆ. ಪುನೀತ್​ಗೆ ಪದ್ಮಶ್ರೀ, ಡಾ. ರಾಜ್​ಕುಮಾರ್‌ಗೆ​ ಭಾರತ ರತ್ನ ಗೌರವ ನೀಡಬೇಕು. ಈ ಬಗ್ಗೆ ಪ್ರಧಾನಿಗೆ ಪತ್ರ ಬರೆಯುವೆ ಎಂದು ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ.

ಇದನ್ನೂ ಓದಿ: ಪುನೀತ್​ ಸಮಾಧಿ ಬಳಿ ಬಂದು ಹಾಡು ಹೇಳಿದ ಮಕ್ಕಳು; ಪುಟ್ಟ ಹೃದಯಗಳಿಗೆ ಅಪ್ಪು ಎಂದರೆ ಪಂಚಪ್ರಾಣ

ಇದನ್ನೂ ಓದಿ: Puneeth Rajkumar: ಪುನೀತ್ ಸಮಾಧಿ ದರ್ಶನದ ಅವಧಿ ಇಂದು 7 ಗಂಟೆವರೆಗೆ ವಿಸ್ತರಣೆ; ನಾಳೆ ಕಾರ್ಯ ಮುಗಿಸಿದ ನಂತರ ದರ್ಶನಕ್ಕೆ ಅವಕಾಶ

TV9 Kannada


Leave a Reply

Your email address will not be published. Required fields are marked *