ರಾಯಚೂರು: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸದ ಕಾರಣ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ ತಡೆದು ತಹಶೀಲ್ದಾರ್ ಕಚೇರಿಗೆ ಪಾದಯಾತ್ರೆ ನಡೆಸಿದ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ನಾರಬಂಡದಲ್ಲಿ ನಡೆದಿದೆ.
ನಾರಬಂಡ, ನಾರಬಂಡ ತಾಂಡಾ, ಹುಣಚೇಡ್, ಅಲ್ಕೋಡ್, ಶಾವಂತಗಲ್, ವಡವಟ್ಟಿ ಸೇರಿದಂತೆ ಹತ್ತಾರು ಗ್ರಾಮಗಳ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಸಿರವಾರಕ್ಕೆ ಬರುತ್ತಾರೆ. ಆದರೆ ಇವೆಲ್ಲ ಗ್ರಾಮಕ್ಕೆ ಒಂದೇ ಬಸ್ ಬಿಟ್ಟಿರುವದರಿಂದ ವಿದ್ಯಾರ್ಥಿಗಳು ಜೀವವನ್ನು ಕೈಯಲ್ಲಿಡಿದು ಪ್ರಯಾಣಿಸುವ ಅನಿವಾರ್ಯತೆ ಎದುರಾಗಿದೆ.
ಇನ್ನೂ ಕೆಲ ವಿದ್ಯಾರ್ಥಿಗಳು ಬಸ್ನ ಬಾಗಿಲು ಬಳಿ ಜೋತು ಬಿದ್ದು ಬರುತ್ತಿದ್ದು ಶಾಲೆಗೆ ಹೋಗಲು ಸರ್ಕ್ಸ್ ಮಾಡಬೇಕೆಗಿದೆ. ಸಾರಿಗೆ ಸಂಸ್ಥೆಯ ನಿರ್ಲಕ್ಯಕ್ಕೆ ಬೇಸತ್ತ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು ಯಾವವೊಬ್ಬ ಅಧಿಕಾರಿಗಳು ಬಂದಿಲ್ಲ. ಆದ್ದರಿಂದ ನಾರಬಂಡದಿಂದ ಸಿರವಾರ ತಹಶೀಲ್ದಾರ್ ಕಚೇರಿಗೆ ವಿದ್ಯಾರ್ಥಿಗಳು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.