ಬಿಜೆಪಿಗೆ ‘ಕೈ’ಎತ್ತಿದ ಎ.ಮಂಜು; ಶೀಘ್ರದಲ್ಲೇ ಮತ್ತೆ ಕಾಂಗ್ರೆಸ್​ಗೆ ಸೇರ್ಪಡೆ..?


ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆ ಒಂದರಲ್ಲಿ ಬಿಜೆಪಿ ನಾಯಕ, ಮಾಜಿ ಸಚಿವ ಎ.ಮಂಜು ಸಿದ್ದರಾಮಯ್ಯರನ್ನ ಭೇಟಿ ಆಗಿದ್ದಾರೆ.

ನಿನ್ನೆ ರಾತ್ರಿ ಸಿದ್ದರಾಮಯ್ಯರ ಸರ್ಕಾರಿ ನಿವಾಸದಲ್ಲಿ ಎ.ಮಂಜು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕೆಲವು ವರದಿಗಳ ಪ್ರಕಾರ, ಕಾಂಗ್ರೆಸ್​ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. 2023ರ ವಿಧಾನಸಭೆ ಚುನಾವಣೆಯನ್ನ ಗುರಿಯಾಗಿಸಿಟ್ಟುಕೊಂಡು ಎಂ.ಮಂಜು ಅವರನ್ನ ಅತೀ ಶೀಘ್ರದಲ್ಲೇ ಕಾಂಗ್ರೆಸ್​ಗೆ ಸೇರ್ಪಡೆ ಮಾಡಿಕೊಳ್ಳುವ ಕೆಲಸಕ್ಕೆ ಕಾಂಗ್ರೆಸ್​ ಮುಂದಾಗಿದೆ ಎನ್ನಲಾಗಿದೆ.

ಈ ಕಾಂಗ್ರೆಸ್​​ನಲ್ಲಿಯೇ ಇದ್ದ ಎ.ಮಂಜು 2019 ಮಾರ್ಚ್​​ನಲ್ಲಿ ಬಿಜೆಪಿ ಸೇರಿದ್ದರು. ಇದೀಗ ಮತ್ತೆ ಬಿಜೆಪಿಯಿಂದ ಕಾಂಗ್ರೆಸ್​ ಸೇರುತ್ತಾರೆ ಅನ್ನೋ ವದಂತಿ ತುಂಬಾ ದಿನದಿಂದ ಇದೆ.

The post ಬಿಜೆಪಿಗೆ ‘ಕೈ’ಎತ್ತಿದ ಎ.ಮಂಜು; ಶೀಘ್ರದಲ್ಲೇ ಮತ್ತೆ ಕಾಂಗ್ರೆಸ್​ಗೆ ಸೇರ್ಪಡೆ..? appeared first on News First Kannada.

News First Live Kannada


Leave a Reply

Your email address will not be published. Required fields are marked *