ಬೆಂಗಳೂರು: ಇಡೀ ದೇಶಾದ್ಯಂತ ಭಾರೀ ಸಂಚಲನ ಮೂಡಿಸಿರುವ ಬಿಟ್ ಕಾಯಿನ್ ಕೇಸ್ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿಗೆ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಐದು ಸವಾಲುಗಳು ಎಸೆದಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಪ್ರಿಯಾಂಕ್ ಖರ್ಗೆ, ಬಿಟ್ ಕಾಯಿನ್ ಕೇಸ್ ಅಷ್ಟು ಮುಖ್ಯವಲ್ಲ ಎಂದು ಸಿಎಂ ಹೇಳುತ್ತಾರೆ. ಹಾಗಾದ್ರೆ ಪ್ರಧಾನಿ ಮೋದಿ ಬಳಿ ಹೋಗಿ ಏಕೆ ಚರ್ಚಿಸಿದ್ರು ಎಂದು ಬೊಮ್ಮಾಯಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದರು.
ಬಿಟ್ ಕಾಯಿನ್ ಪ್ರಕರಣ ದೊಡ್ಡ ಹಗರಣ. ನವೆಂಬರ್ 14 ರಂದು ಶ್ರೀಕಿ ಸರಂಡರ್ ಆಗ್ತಾರೆ. ಬಳಿಕ 3 ದಿನ ಕೇಸ್ ಕುರಿತು ಯಾವುದೇ ರಿಪೋರ್ಟ್ ಆಗಲ್ಲ. ನವೆಂಬರ್ 17 ರಂದು ಕೇಸ್ ದಾಖಲಾಗುತ್ತೆ. ಬಳಿಕ 14 ದಿನ ಪೊಲೀಸ್ ಕಸ್ಟಡಿಗೆ ಪಡೆಯುತ್ತಾರೆ ಎಂದರು.
ಇನ್ನು, ಸರ್ಕಾರಕ್ಕೆ ಐದು ಪ್ರಶ್ನೆ ಕೇಳಿದ ಪ್ರಿಯಾಂಕ್ ಖರ್ಗೆ ಕೆಂಡಕಾರಿದರು. ಸರ್ಕಾರ ನಮ್ಮನ್ನು ಬ್ಲ್ಯಾಕ್ಮೇಲ್ ಮಾಡೋದು ಬೇಡ. ಕಾಂಗ್ರೆಸ್ಸಿಗರು ಯಾರೇ ಭಾಗಿಯಾಗಿದ್ದರೂ ಒದ್ದು ಒಳಹಾಕಿ. ಬಿಟ್ ಕಾಯಿನ್ ಕೇಸ್ ಡೈವರ್ಟ್ ಮಾಡಲು ಕಾಂಗ್ರೆಸ್ ನಾಯಕರು ಇದ್ದಾರೆ ಎಂದು ಆರೋಪ ಮಾಡುತ್ತಿದ್ದೀರಿ ಯಾಕೆ ಎಂದರು.
ಪ್ರಿಯಾಂಕ್ ಖರ್ಗೆ ಬೊಮ್ಮಾಯಿಗೆ ಕೇಳಿದ ಐದು ಪ್ರಶ್ನೆಗಳು ಹೀಗಿದ್ದವು..
- ಪೊಲೀಸ್ ಕಸ್ಟಡಿಯಲ್ಲಿದ್ದಾಗ ಶ್ರೀಕಿಗೆ ಡ್ರಗ್ಸ್ ಕೊಡಲಾಗಿತ್ತಾ?
- 186 ಬಿಟ್ ಕಾಯಿನ್ ಮೊತ್ತ ₹100 ಕೋಟಿ, ಇದೆಲ್ಲೋಯ್ತು?
- ಶ್ರೀಕಿ ಹ್ಯಾಕ್ ಮಾಡಿದ್ದ 5 ಸಾವಿರ ಕಾಯಿನ್ ಎಲ್ಲೋಯ್ತು?
- ಇ.ಡಿ, ಇಂಟರ್ ಪೋಲ್ಗೆ ಮಾಹಿತಿ ನೀಡಲು ವಿಳಂಬವೇಕೆ?
- 80 ಸಾವಿರ ಯೂರೋ ಟ್ರಾನ್ಸಫರ್ ಮಾಡಿದ್ರೂ ತನಿಖೆ ಯಾಕಿಲ್ಲ?
ಇದನ್ನೂ ಓದಿ: #BitCoin ವಿಚಾರದಲ್ಲಿ CM ನನ್ನ ಸೆಟಲ್ಮೆಂಟ್ಗೆ ಕರೆದಂತಿತ್ತು -ಪ್ರಿಯಾಂಕ್ ಖರ್ಗೆ ಆರೋಪ
The post ಬಿಟ್ ಕಾಯಿನ್ ಕೇಸ್: ಸಿಎಂ ಬೊಮ್ಮಾಯಿಗೆ ಪ್ರಿಯಾಂಕ್ ಖರ್ಗೆ ಐದು ಸವಾಲು; ಯಾವುವು..? appeared first on News First Kannada.