ಚಿಕಿತ್ಸೆ ಪಡೆಯುತ್ತಿರುವ ಆರೋಪಿ ರಘು
ಬೆಂಗಳೂರು: ರಾಮಮೂರ್ತಿನಗರ, ಹೆಣ್ಣೂರು ನಡುವಿನ ರೈಲ್ವೆ ಬ್ರಿಡ್ಜ್ ಬಳಿ ಕೊಲೆ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ರಿಕವರಿಗೆ ಹೋಗಿದ್ದ ವೇಳೆ ಆರೋಪಿ ರಘು ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ರಘು ಮೇಲೆ ಬೆಂಗಳೂರಿನ ಹೆಣ್ಣೂರು ಠಾಣೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ನವೆಂಬರ್ 12ರಂದು ಆರೋಪಿ ರಘು ಶ್ರೀಧರ್ ಎಂಬುವವರನ್ನು ಕೊಲೆಮಾಡಿದ್ದ. ಗ್ಯಾಂಗ್ ಸಮೇತ ಬಂದು ಬಾಣಸವಾಡಿಯ ರಾಮಸ್ವಾಮಿಪಾಳ್ಯ ನಿವಾಸಿ ಶ್ರೀಧರ್ನ ಹತ್ಯೆಗೈದಿದ್ದ. ಕೊಲೆಯಾದ ಶ್ರೀಧರ್ ಮಾನವ ಹಕ್ಕು ಮತ್ತು ಭ್ರಷ್ಟಾಚಾರ ಮುಕ್ತ ಎಂಬ ಸಂಘಟನೆಯ ಉಪಾಧ್ಯಕ್ಷನಾಗಿದ್ದರು. ರಿಂಗ್ ರಸ್ತೆಯ ಸರ್ವಿಸ್ ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಬಂದಿದ್ದ ಗುಂಪು ಶ್ರೀಧರ್ನ ಕೊಲೆ ಮಾಡಿದ್ದರು.
ಕಾರು ಬಿಟ್ಟು ಸರ್ವಿಸ್ ರಸ್ತೆಯಲ್ಲಿ ಮೃತ ಶ್ರೀಧರ್ ಓಡಿದ್ದರು. ಆದರೆ ದುಷ್ಕರ್ಮಿಗಳು ಬೆನ್ನತ್ತಿ ಹತ್ಯೆಗೈದಿದ್ದಾರೆ. ಈ ಬಗ್ಗೆ ಹೆಣ್ಣೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ರಿಕವರಿಗೆ ಹೋಗಿದ್ದ ವೇಳೆ ಆರೋಪಿ ರಘು ಪಿಎಸ್ಐ ನಿಂಗರಾಜು ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಬಳಿಕ ಇನ್ಸ್ಪೆಕ್ಟರ್ ಮೇಲೂ ಹಲ್ಲೆಗೆ ಮುಂದಾಗಿದ್ದ. ಈ ವೇಳೆ ಆತ್ಮರಕ್ಷಣೆಗೆಂದು ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.
ಇದನ್ನೂ ಓದಿ
ಕೋಲಾರ: ಭಾರೀ ಮಳೆಗೆ ಕೊಳೆಯುತ್ತಿರುವ ಹೂವಿನ ಬೆಳೆ; ರೈತರು ಕಂಗಾಲು
ತೀವ್ರ ಹೃದಯಾಘಾತ: ಜನ್ಮದಿನ ಪ್ರವಚನ ಮಾಡುತ್ತಲೇ ಜೀವ ಬಿಟ್ಟ ಸ್ವಾಮೀಜಿ, ಮೊಬೈಲ್ ನಲ್ಲಿ ಸೆರೆ