ಬಳ್ಳಾರಿ: ಜಿಲ್ಲೆಯಲ್ಲಿ ಕೋವಿಡ್ ಉಲ್ಬಣ ಹಿನ್ನೆಲೆ ಜಿಲ್ಲಾಧಿಕಾರಿ ದಿಢೀರ್ ಕಾಲೇಜು ಹಾಸ್ಟೆಲ್ಗಳ ಬಂದ್ ಆದೇಶ ಪರಿಣಾಮ ಸಾಕಷ್ಟು ವಿದ್ಯಾರ್ಥಿಗಳು ನಗರದ ಲಾಡ್ಜ್ಗಳ ಮೊರೆ ಹೋಗಿದ್ದಾರೆ.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಅಬ್ಬರ ಹೆಚ್ಚಾಗುತ್ತಿದೆ. ಇದರ ಹಿನ್ನೆಲೆ ಜಿಲ್ಲಾಧಿಕಾರಿ ಎಲ್ಲ ಕಾಲೇಜಿನ ಹಾಸ್ಟೆಲ್ಗಳನ್ನು ಬಂದ್ ಮಾಡುವಂತೆ ಆದೇಶ ನೀಡಿದ್ದಾರೆ. ಆದೇಶದ ಬೆನ್ನಲ್ಲೇ ಸಿಬ್ಬಂದಿ ವಿದ್ಯಾರ್ಥಿಗಳನ್ನು ಹೊರಹಾಕಿದ್ದು ದಾರಿಕಾಣದ ವಿದ್ಯಾರ್ಥಿಗಳು ವಾಸ್ತವ್ಯಕ್ಕೆ ಲಾಡ್ಜ್ಗಳ ಮೊರೆ ಹೋಗಿದ್ದಾರೆ. ಇಲ್ಲಿ ಕೂಡ ಸಾಕಷ್ಟು ಜನ ಬಂದಿದ್ದರಿಂದ ವಿದ್ಯಾರ್ಥಿಗಳು ಪಾಳಿಯಲ್ಲಿ ನಿಂತು ಕಾಯ್ದಿದ್ದಾರೆ.
ಇನ್ನು ಘಟನೆ ಕುರಿತು ಆರೋಗ್ಯ ಸಚಿವ ಕೆ.ಸುಧಾಕರ್ ಪ್ರತಿಕ್ರಿಯಿಸಿದ್ದು ಮುಖ್ಯಮಂತ್ರಿಗಳು ಆಯಾ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಈ ಕ್ರಮ ಕೈಗೊಳ್ಳಲು ಅಧಿಕಾರ ನೀಡಿದ್ದಾರೆ. ಬಹುಶಃ ವಿದ್ಯಾರ್ಥಿಗಳು ಇರುವ ವಸತಿ ಶಾಲೆಯಲ್ಲಿ ಹೆಚ್ಚಿನ ಸೊಂಕಿತರು ಕಂಡು ಬಂದಿರಬಹುದು. ಹೀಗಾಗಿ ಈ ಕ್ರಮ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ತರಿಸಿಕೊಂಡು ವಿಚಾರಿಸುತ್ತೇನೆ ಎಂದಿದ್ದಾರೆ.