ಭಾರತದಲ್ಲಿ ಮತ್ತೆ ಕೊರೊನಾ ಆತಂಕ: ಕೇಂದ್ರದಿಂದ 5 ರಾಜ್ಯಗಳಿಗೆ ಪತ್ರ | Govt of India Writes Letter to 5 States Asks to take Suitable Measures to Control Covid


ಭಾರತದಲ್ಲಿ ಮತ್ತೆ ಕೊರೊನಾ ಆತಂಕ: ಕೇಂದ್ರದಿಂದ 5 ರಾಜ್ಯಗಳಿಗೆ ಪತ್ರ

ಪ್ರಾತಿನಿಧಿಕ ಚಿತ್ರ

ದೆಹಲಿ: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಐದು ರಾಜ್ಯಗಳಿಗೆ ಪತ್ರ ಬರೆದು ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ. ಹರಿಯಾಣ, ಉತ್ತರ ಪ್ರದೇಶ, ದೆಹಲಿ, ಮಿಜೋರಾಂ ಮತ್ತು ಮಹಾರಾಷ್ಟ್ರ ಸರ್ಕಾರಗಳಿಗೆ ಕೇಂದ್ರ ಅರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ. ಟೆಸ್ಟ್, ಟ್ರ್ಯಾಕ್, ಟ್ರೀಟ್​ಮೆಂಟ್, ವ್ಯಾಕ್ಸಿನೇಷನ್ ಹೆಚ್ಚಿಸುವಂತೆ ಅವರು ಸಲಹೆ ಮಾಡಿದ್ದಾರೆ. ಜಿನೋಮಿಕ್ ಸೀಕ್ವೆನ್ಸಿಂಗ್ ಹೆಚ್ಚಿಸಿ, ಹೆಚ್ಚು ಜನರು ಗುಂಪು ಸೇರದಂತೆ ನಿಗಾವಹಿಸಿ, ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ, ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಸೂಕ್ತ ಚಿಕಿತ್ಸೆ ನೀಡಿ ಎಂದು ಹೇಳಿದ್ದಾರೆ. ಸೋಂಕು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸಲಹೆ ಮಾಡಿದ್ದಾರೆ.

(ಮತ್ತಷ್ಟು ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ)

TV9 Kannada


Leave a Reply

Your email address will not be published. Required fields are marked *