ಮಳೆ ಹಾನಿ ತಡೆಗೆ ತುರ್ತು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ; ಸಿಎಂ ಬೊಮ್ಮಾಯಿ


ಬೆಂಗಳೂರು: ಗುರುವಾರ ರಾತ್ರಿಯಿಡೀ ಸುರಿದ ಭಾರೀ ಮಳೆ ತಡೆ ಸಂಬಂಧ ಸಿಎಂ ಬಸವರಾಜ್​​ ಬೊಮ್ಮಾಯಿ ನೇತೃತ್ವದ ಅಧಿಕಾರಿಗಳ ಸಭೆ ನಡೆಯಿತು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತುರ್ತು ಸಭೆ ಕರೆದ ಬಸವರಾಜ ಬೊಮ್ಮಾಯಿ, ವಿಪತ್ತು ನಿರ್ವಹಣಾ ದಳದ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಈ ವೇಳೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. 

ಸಭೆ ಬಳಿಕ ಮಾತಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ ಹಲವು ಕಡೆ ಹಾನಿಯಾಗಿದೆ. ಭಾರೀ ಮಳೆಯಿಂದ ಹಲವು ಕಟ್ಟಡಗಳು, ತಡೆಗೋಡೆಗಳು, ಮನೆಗಳು ಕುಸಿದು ಬಿದ್ದಿವೆ. ಇಲ್ಲಿ ಸಿಕ್ಕಿಹಾಕಿಕೊಂಡವರ ರಕ್ಷಣಾ ಕಾರ್ಯಕ್ಕೆ ಹೋಮ್​​ ಗಾರ್ಡ್​ ಬಳಕೆ ಮಾಡುತ್ತಿದ್ದೇವೆ. ಮಳೆ ಹಾನಿ ತಡೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇದಕ್ಕಾಗಿ ತುರ್ತು ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದರು

News First Live Kannada


Leave a Reply

Your email address will not be published. Required fields are marked *