
ಹೆಚ್.ವಿಶ್ವನಾಥ್
ಪಠ್ಯಪುಸ್ತಕ ಪರಿಷ್ಕರಣೆಗೆ ಹೆಚ್.ವಿಶ್ವನಾಥ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಪಠ್ಯಪುಸ್ತಕದಲ್ಲಿ ಕೇಸರಿಕರಣ ನುಸುಳುತ್ತಿರುವುದು ಅಪಾಯಕಾರಿ. ಧರ್ಮದ ಆಧಾರಿತ ಪಠ್ಯಪುಸ್ತಕ ಯಾವುದೇ ಕಾರಣಕ್ಕೂ ಬೇಡ.
ಮೈಸೂರು: ರಾಜ್ಯದಲ್ಲಿ ಸಚಿವ ಸಂಪುಟ ಚರ್ಚೆ ನಡೆಯುತ್ತಿದ್ದು, ವಿಜಯೇಂದ್ರಗೆ ಸಚಿವ ಸ್ಥಾನ ನೀಡುವುದಕ್ಕೆ ಹೆಚ್.ವಿಶ್ವನಾಥ್ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ಮಿನಿಸ್ಟರ್ ಆಗ್ತಾರ ಎನ್ನುವ ಪತ್ರಕರ್ತರ ಪ್ರಶ್ನೆಗೆ ಹೆಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. ಆಗುವುದಾದರೆ ಆಗಲಿ ಬಿಡಿ. ಗುಣಾತ್ಮಕ ವಿಚಾರಕ್ಕೆ ಬದಲಾವಣೆಗಳು ಆಗಬೇಕು. ವಿಜಯೇಂದ್ರ ಮಿನಿಸ್ಟರ್ ಮಾಡಿದರೆ ಗುಣಾತ್ಮಕ ಬದಲಾವಣೆ ಆಗುತ್ತಾ ಎಂದು ಮೈಸೂರಿನಲ್ಲಿ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಪ್ರಶ್ನೆ ಕೇಳಿದರು. ವಿಶ್ವನಾಥ್ಗೆ ಸಚಿವ ಸ್ಥಾನ ನೀಡುವಂತೆ ಹೋರಾಟ ವಿಚಾರವಾಗಿ ಕೆಲವರು ಹೋರಾಟ ಮಾಡುತ್ತಾ ಇದ್ದಾರೆ. ಆದರೆ ಇವರು ಕೊಡಬೇಕಲ್ಲ ಎಂದು ಹೇಳಿದರು.
ಪಠ್ಯಪುಸ್ತಕ ಪರಿಷ್ಕರಣೆಗೆ ಹೆಚ್.ವಿಶ್ವನಾಥ್ ತೀವ್ರ ಅಸಮಾಧಾನ
ಪಠ್ಯಪುಸ್ತಕ ಪರಿಷ್ಕರಣೆಗೆ ಹೆಚ್.ವಿಶ್ವನಾಥ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಪಠ್ಯಪುಸ್ತಕದಲ್ಲಿ ಕೇಸರಿಕರಣ ನುಸುಳುತ್ತಿರುವುದು ಅಪಾಯಕಾರಿ. ಧರ್ಮದ ಆಧಾರಿತ ಪಠ್ಯಪುಸ್ತಕ ಯಾವುದೇ ಕಾರಣಕ್ಕೂ ಬೇಡ. ಯಜ್ಞ ಕುಂಡ ಯಾವ ಕಡೆ ಇರಬೇಕೆಂದು ಪಠ್ಯದಲ್ಲಿ ಸೇರ್ಪಡೆ ಮಾಡಿದ್ದು, ಇಂತಹ ಪಠ್ಯಬೋಧನೆ ಮಾಡುವುದು ಯಾರಿಗೆ ಬೇಕು? ಶಿಕ್ಷಣ ತಜ್ಞರಲ್ಲದವರು ಅಧ್ಯಕ್ಷರಾಗಿರುವುದು ದುರಂತ. ರೋಹಿತ್ ಚಕ್ರತೀರ್ಥ ಸಂಘ ಪರಿವಾರದ ಕಾರ್ಯಕರ್ತ. ಹೆಡ್ಗೆವಾರ್ಗೂ ಟಿಪ್ಪುಗೆ ಹೋಲಿಕೆ ಮಾಡುತ್ತಿರುವುದು ಸರಿಯಲ್ಲ. ಟಿಪ್ಪು ಬ್ರಿಟಿಷರ ವಿರುದ್ಧ ಹೋರಾಡಿದ ವೀರಚರಿತ್ರೆ ಗೊತ್ತಿಲ್ವಾ? ಟಿಪ್ಪು ಮಂಡಿಯೂರದೆ ತನ್ನ ಮಕ್ಕಳನ್ನು ಗಿರವಿ ಇಟ್ಟವನು ಎಂದು ಹೇಳಿದರು.