ಸರ್ಕಾರದ ಜಾಹೀರಾತಿನಲ್ಲಿ ನೆಹರು ಫೋಟೋ ಕೈಬಿಟ್ಟ ವಿಚಾರಕ್ಕೆ ಸಂಬಂಧಿಸಿ ಸಿಎಂ ಬೊಮ್ಮಾಯಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ. ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದವರನ್ನು ಸ್ಮರಿಸಿ, ಗೌರವ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ.

ಕರ್ನಾಟಕ ಸರ್ಕಾರದ ಜಾಹೀರಾತು
ಬೆಂಗಳೂರು: ಕರ್ನಾಟಕ ಸರ್ಕಾರವು (Govt of Karnataka) ‘ಪ್ರತಿ ಮನೆಯ ಮೇಲೆ ತ್ರಿವರ್ಣ ಧ್ವಜ’ (Har Ghar Tiranga) ಅಭಿಯಾನದ ಉತ್ತೇಜನಕ್ಕಾಗಿ ಬಿಡುಗಡೆ ಮಾಡಿರುವ ಜಾಹೀರಾತಿನಲ್ಲಿ ಜವಾಹರ್ಲಾಲ್ ನೆಹರು (Jawaharlal Nehru) ಅವರ ಭಾವಚಿತ್ರ ಕೈಬಿಟ್ಟಿರುವುದು ಕಾಂಗ್ರೆಸ್ನ (Indian National Congress) ಕೆಂಗಣ್ಣಿಗೆ ಗುರಿಯಾಗಿದೆ. ಸದ್ಯ ಈಗ ನೆಹರು ಭಾವಚಿತ್ರ ಕೈಬಿಟ್ಟ ಬಗ್ಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಹಾಗೂ ಮತ್ತೊಂದು ಕಡೆ ಡಿಕೆ ಶಿವಕುಮಾರ್(DK Shivakumar), ಸಿಎಂ ಬಸವರಾಜ ಬೊಮ್ಮಾಯಿಗೆ(Basavaraj Bommai) ಪತ್ರ ಬರೆದಿದ್ದಾರೆ.
ಸರ್ಕಾರದ ಜಾಹೀರಾತಿನಲ್ಲಿ ನೆಹರು ಭಾವಚಿತ್ರ ಕೈಬಿಟ್ಟಿದ್ದಕ್ಕೆ ಸ್ಪಷ್ಟನೆ
ಜವಾಹರ್ ಲಾಲ್ ನೆಹರು ದೇಶ ವಿಭಜನೆಗೆ ಕಾರಣರಾದವರು. ಹೀಗಾಗಿ ಉದ್ದೇಶಪೂರ್ವಕವಾಗಿಯೇ ನಾವು ನೆಹರು ಭಾವಚಿತ್ರ ಕೈಬಿಟ್ಟಿದ್ದೇವೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ತಿಳಿಸಿದ್ದಾರೆ. ಜವಾಹರ್ ಲಾಲ್ ನೆಹರು ಮಹಾತ್ಮ ಗಾಂಧಿ ಮಾತನ್ನೇ ಕೇಳಲಿಲ್ಲ. ಸ್ವಾತಂತ್ರ್ಯ ನಂತರ ಕಾಂಗ್ರೆಸ್ ವಿಸರ್ಜಿಸಿ ಎಂದು ಗಾಂಧಿ ಹೇಳಿದ್ದರು. ಆದರೆ ಜವಾಹರ್ ಲಾಲ್ ನೆಹರು ಕಾಂಗ್ರೆಸ್ ವಿಸರ್ಜನೆ ಮಾಡಲಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.