ಮಾಲಿವುಡ್ ನಟ ದುಲ್ಖರ್ ಸಲ್ಮಾನ್ ನಟನೆಯ ಕುರುಪ್ ಚಿತ್ರದ ವಿರುದ್ಧ ಕೇರಳ ಹೈಕೋರ್ಟ್ನಲ್ಲಿ ಕೇಸ್ ದಾಖಲಾಗಿದೆ. ಇಂದು ಈ ಚಿತ್ರ ತೆರೆ ಮೇಲೆ ಅಪ್ಪಳಿಸಿದ್ದು, ಕೊಚ್ಚಿಯ ನಿವಾಸಿಯೊಬ್ಬರು ಕೇಸ್ ದಾಖಲಿಸಿದ್ದಾರೆ.
ಈ ಚಿತ್ರದಲ್ಲಿ ಸುಕುಮಾರ್ ಕುರುಪ್ ಎಂಬ ವ್ಯಕ್ತಿಯ ತೇಜೋವಧೆ ಮಾಡಲಾಗಿದೆ ಅಂತ ಸ್ಥಳೀಯ ನಿವಾಸಿ ದೂರು ನೀಡಿದ್ದಾರೆ. ದೂರು ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್ ಕೇರಳ ಸರ್ಕಾರಕ್ಕೆ ಹಾಗೂ ಸಿನಿಮಾ ನಿರ್ಮಾಪಕರಿಗೆ ನೋಟಿಸ್ ನೀಡಿ ಮಾಹಿತಿ ಕೇಳಿದೆ. ಆದರೆ ಸಿನಿಮಾ ರಿಲೀಸ್ಗೆ ಯಾವುದೇ ತಡೆಯನ್ನ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಕೇರಳದಲ್ಲಿ ಕುರುಪ್ ಚಿತ್ರ ರಿಲೀಸ್ ಆಗಿದೆ.
ಇದು 1984ರಲ್ಲಿ ನಡೆದ ನೈಜ ಘಟನೆ ಆಧಾರಿತ ಸಿನಿಮಾವಾಗಿದ್ದು, ಈ ವರ್ಷದ ಮೇ ನಲ್ಲಿ ಸಿನಿಮಾ ರಿಲೀಸ್ ಆಗಬೇಕಿತ್ತು. ಆದ್ರೆ ಕೊರೊನಾ ಎರಡನೇ ಅಲೆ, ಲಾಕ್ಡೌನ್ನಿಂದಾಗಿ ಚಿತ್ರವನ್ನು ಇಂದು ರಿಲೀಸ್ ಆಗಿದೆ.