ಒಬ್ಬರಿಂದಲೇ ಸ್ವಾತಂತ್ರ್ಯ ಬಂದಿದೆ ಎಂಬುವುದು ಮೂರ್ಖತನ. ಮೊಸರಲ್ಲಿ ಕಲ್ಲು ಹುಡುಕುವವರಿಗೆ ಎಲ್ಲವೂ ತಪ್ಪಾಗಿ ಕಾಣುತ್ತೆ ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕ ಸಿ.ಟಿ.ರವಿ ವ್ಯಂಗ್ಯವಾಡಿದರು.

ಕಂದಾಯ ಸಚಿವ ಆರ್.ಅಶೋಕ್
ಬೆಂಗಳೂರು: ಸಿದ್ದರಾಮಯ್ಯ ಸ್ವಾತಂತ್ರ್ಯ ಹೋರಾಟದ ಫಲಾನುಭವಿ ಅಷ್ಟೇ. ಸ್ವಾತಂತ್ರ್ಯ ಹೋರಾಟದಲ್ಲಿ ಸಿದ್ದರಾಮಯ್ಯ (Siddaramaiah) ಭಾಗಿಯಾಗಿಲ್ಲ. ಈಗಾಗಲೇ ಅವರು ಎರಡು ಪಕ್ಷಗಳನ್ನು ಬದಲಿಸಿದ್ದಾರೆ. ಕಾಂಗ್ರೆಸ್ ಸಿದ್ದರಾಮಯ್ಯನವರ ಮೂರನೇ ಪಕ್ಷ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದರು. ಕಂಠೀರವ ಕ್ರೀಡಾಂಗಣದಲ್ಲಿ ಬಿಜೆಪಿ ಅಮೃತ ಭಾರತಿಗೆ ಕರುನಾಡ ಜಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 75 ವರ್ಷವನ್ನು ನರೇಂದ್ರ ಮೋದಿ ಇಡೀ ರಾಷ್ಟ್ರ ನೋಡುವಂತೆ ಮಾಡಿದರು. ಸಿದ್ದರಾಮಯ್ಯ ಹೇಳುತ್ತಿದ್ದರು ಸ್ವಾತಂತ್ರ್ಯ ನಾವು ತಂದು ಕೊಟ್ಟೆವು ಅಂತ. ಕಾಂಗ್ರೆಸ್ ದೇಶಕ್ಕೆ ಅನೇಕ ಪ್ರಧಾನಿಗಳನ್ನು ಕೊಟ್ಟರೂ ಲಾಲ್ ಬಹದ್ದೂರ್ ಶಾಸ್ತ್ರಿ ಬಿಟ್ರೆ ಯಾರೂ ಕೆಲಸ ಮಾಡಲಿಲ್ಲ.