ಭಾರತೀಯ ವಾಯು ಸೇನೆ Mi-17V5 ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಅಪಘಾತಕ್ಕೀಡಾಗಿದೆ. ಇಂದು ಸಂಭವಿಸಿದ ಹೆಲಿಕಾಪ್ಟರ್ ದುರ್ಘಟನೆಯಲ್ಲಿ ಬರೋಬ್ಬರಿ 4 ಮಂದಿ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಈ ಸಂಬಂಧ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಯವರು ಟ್ವೀಟ್ ಮಾಡಿ, ಹೆಲಿಕಾಪ್ಟರ್ನಲ್ಲಿ ಎಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸಿದ್ದಾರೆ.