ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ನಿರ್ಣಾಯಕ ಟೆಸ್ಟ್ ಪಂದ್ಯದಲ್ಲಿ ಸಂಕಷ್ಟಕ್ಕೆ ಸಿಲುಕಿದ ಭಾರತಕ್ಕೆ ನೆರವಾಗಿದ್ದು ನಾಯಕ ವಿರಾಟ್ ಕೊಹ್ಲಿ ಮತ್ತು ರಿಷಭ್ ಪಂತ್ ಜೊತೆಯಾಟ. ಈ ಜೋಡಿ ತಂಡಕ್ಕೆ 94 ರನ್ಗಳ ಕಾಣಿಕೆ ನೀಡ್ತು. ಪರಿಣಾಮ ಭಾರತ ಚೇತರಿಕೆಯತ್ತ ಹೆಜ್ಜೆ ಹಾಕ್ತು. ಇದೇ ವೇಳೆ ಪಂತ್ ಸ್ಫೋಟಕ ಬ್ಯಾಟಿಂಗ್ ನಡೆಸಿ ಶತಕ ಸಿಡಿಸಿದ್ರು.
58ಕ್ಕೆ 4 ವಿಕೆಟ್ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಅದ್ಭುತ ಕೊಡುಗೆ ನೀಡಿದ್ರು ಪಂತ್. ಸತತ ವಿಕೆಟ್ ಉರುಳುತ್ತಿದ್ದರೂ ಲೀಲಾಜಾಲವಾಗಿ ಬ್ಯಾಟ್ ಬೀಸಿದ ರಿಷಭ್ ತಮ್ಮ ಹೊಡಿ ಬಡಿ ಆಟ ಮುಂದುವರಿಸಿ ಟೆಸ್ಟ್ ವೃತ್ತಿಬದುಕಿನ 4ನೇ ಶತಕ ಬಾರಿಸಿದರು. ಆ ಮೂಲಕ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ಶತಕ ಬಾರಿಸಿದ ಭಾರತದ ಮೊದಲ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಪಂತ್ ಆಟಕ್ಕೆ ಟೀಮ್ ಇಂಡಿಯಾದ ಮಾಜಿ ಓಪನರ್ ವೀರೇಂದ್ರ ಸೆಹ್ವಾಗ್ ಯುವ ಆಟಗಾರನ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ರಿಷಭ್ ಪಂತ್ ಅದ್ಭುತ ಸೆಂಚೂರಿ ಬಾರಿಸಿದ್ದಾರೆ. ಇನಿಂಗ್ಸ್ನಲ್ಲಿ ಭಾರತದ ಪರ ಪಂತ್ ಹೊರತಾಗಿ ಇಬ್ಬರು ಬ್ಯಾಟ್ಸ್ಮನ್ಗಳು ಮಾತ್ರ ಎರಡಂಕಿಯ ಸ್ಕೋರ್ ಮಾಡಿದ್ದು, ಈ ಶತಕದ ಮಹತ್ವವನ್ನು ತಿಳಿಸಿಕೊಡುತ್ತದೆ. ಅವರು ಏಕಾಂಗಿಯಾಗಿ ಹೋರಾಟ ನಡೆಸಿ ಭಾರತ ತಂಡವನ್ನು ಮೇಲೆತ್ತಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ರಿಷಬ್ ಭಾರತ ತಂಡದ ದೊಡ್ಡ ಮ್ಯಾಚ್ ವಿನ್ನರ್ ಎಂದು ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.