ಹುಣಸೂರು: ಬಾಲಕನನ್ನು ಅಪಹರಿಸಿ ಕೊಲೆ ಮಾಡಿದ ಪ್ರಕರಣ; ಓರ್ವ ಆರೋಪಿಯ ಬಂಧನ | A boy kidnapped and murdered in Hunasuru s Hanagod and accused is arrested


ಹುಣಸೂರು: ಬಾಲಕನನ್ನು ಅಪಹರಿಸಿ ಕೊಲೆ ಮಾಡಿದ ಪ್ರಕರಣ; ಓರ್ವ ಆರೋಪಿಯ ಬಂಧನ

ಮೃತಪಟ್ಟ ಬಾಲಕ

ಹುಣಸೂರು: ಬಾಲಕನನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹುಣಸೂರು ಗ್ರಾಮಾಂತರ ಪೊಲೀಸರಿಂದ ಆರೋಪಿಯನ್ನು ಸೆರೆಹಿಡಿಯಲಾಗಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡಿನ ಕಾರ್ತಿಕ್(9) ಎಂಬ ಬಾಲಕನನ್ನು ಕಿಡ್ನ್ಯಾಪ್ ಮಾಡಿ, ಕೊಲೆ ಮಾಡಲಾಗಿತ್ತು. ಅಪಹರಣದ ನಂತರ ಅಪಹರಣಕಾರರು 4 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಪೊಲೀಸರಿಗೆ ಮಾಹಿತಿ ನೀಡಿದರೆ ಕೊಲೆ ಮಾಡುವ ಬೆದರಿಕೆಯನ್ನೂ ಕಾರ್ತಿಕ್ ತಂದೆ ನಾಗರಾಜ್‌ಗೆ ಒಡ್ಡಿದ್ದರು. ಇದಾದ ಬಳಿಕ ಕುಂಟೇರಿ ಕೆರೆ ಬಳಿ ಬಾಲಕನ ಶವ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಇನ್ನುಳಿದವರಿಗಾಗಿ ಶೋಧ ನಡೆದಿದೆ.

ಇದನ್ನೂ ಓದಿ:

TV9 Kannada


Leave a Reply

Your email address will not be published. Required fields are marked *