ಹುಬ್ಬಳ್ಳಿ: ಟ್ರ್ಯಾಕ್ಟರ್ಗೆ ಟ್ಯಾಂಕರ್ ಡಿಕ್ಕಿ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಸಮೀಪದ ಬುಡರಸಿಂಗಿ ಕ್ರಾಸ್ ಬಳಿ ನಡೆದಿದೆ. ಟ್ರ್ಯಾಕ್ಟರ್ ಹಿಂದಿದ್ದ ಇಬ್ಬರು ಸಾವರರು ಸಾವನ್ನಪ್ಪಿದ್ದಾರೆ.
ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕಲ್ಮೇಶ ಯಂಕಮ್ಮನವರ (26) ಹಾಗೂ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಅಡವಿಸೋಮಾಪುರದ ಕಲ್ಮೇಶ ಜಾಧವ (26) ಮೃತ ದುರ್ದೈವಿಗಳು. ಮುಂಡಗೋಡು ನಿವಾಸಿ ವಿನಾಯಕ ಎಂಬಾತ ಗಾಯಗೊಂಡಿದ್ದು, ಕಿಮ್ಸ್ಗೆ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಟ್ರ್ಯಾಕ್ಟರ್ ಪಂಚರ್ ಆಗಿದ್ದರಿಂದ ರಸ್ತೆ ಬದಿ ನಿಲ್ಲಿಸಲಾಗಿತ್ತು. ಬಾವುಸಾಹೇಬ ಡಾಕನೆ ಎಂಬಾತ ಟ್ಯಾಂಕರ್ ಚಲಾಯಿಸಿಕೊಂಡು ಹಾವೇರಿಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ. ಟ್ಯಾಂಕರ್ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.