ದೇವೆಂದ್ರ ಫಡ್ನವೀಸ್
ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ದೀಪಾವಳಿಗೂ ಮೊದಲು ಒಂದು ಮಾತಾಡಿದ್ದರು. ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್ಗೆ ಭೂಗತ ಲೋಕದ ಸಂಪರ್ಕವಿದೆ ಎಂಬುದನ್ನು ನಾನು ದೀಪಾವಳಿಯ ನಂತರ, ಸಾಕ್ಷಿ ಸಮೇತ ಬಹಿರಂಗಪಡಿಸುತ್ತೇನೆ ಎಂದಿದ್ದರು. ಅದರಂತೆ ಇಂದು ಸುದ್ದಿಗೋಷ್ಠಿ ನಡೆಸಿ, ನವಾಬ್ ಮಲ್ಲಿಕ್ಗೆ ಭೂಗತ ಜಗತ್ತಿನ ನಂಟಿದೆ ಎಂಬುದನ್ನು ಪುನರುಚ್ಚರಿಸಿದರು. ಅದಕ್ಕೆ ಸಂಬಂಧಪಟ್ಟ ದಾಖಲೆಯನ್ನೂ ಪ್ರಸ್ತುತಪಡಿಸಿದ್ದಾರೆ.
ನವಾಬ್ ಮಲ್ಲಿಕ್ ಭೂಗತ ಜಗತ್ತಿನ ನಂಟಿನ ಕುರಿತು ದೀಪಾವಳಿ ನಂತರ ಹೇಳುತ್ತೇನೆ ಎಂದು ಹೇಳಿದ್ದೆ. ಆದರೆ ಅದಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಪಡೆಯಲು ಸ್ವಲ್ಪ ಸಮಯ ಹಿಡಿಯಿತು ಎಂದು ಹೇಳಿದ ದೇವೇಂದ್ರ ಫಡ್ನವೀಸ್, 1993ರಲ್ಲಿ ನಡೆದಿದ್ದ ಮುಂಬೈ ಸ್ಫೋಟದ ಇಬ್ಬರು ಆರೋಪಿಗಳೊಂದಿಗೆ ನವಾಬ್ ಮಲ್ಲಿಕ್ ಆಸ್ತಿ ವ್ಯವಹಾರ, ಒಪ್ಪಂದ ಮಾಡಿಕೊಂಡಿದ್ದರು ಎಂದು ಆರೋಪಿಸಿದರು.