ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ. ನಿನ್ನೆ (ನ.27) ನಡೆದ ಸಿಎಂ ನೇತೃತ್ವದ ಸಭೆಯಲ್ಲಿ ಅಧಿಕಾರಿಗಳಿಗೆ ತಜ್ಞರು ಕೆಲ ಸಲಹೆ ನೀಡಿದ್ದಾರೆ. ಇನ್ನು ಹೊಸ ವರ್ಷಾಚರಣೆ ಮತ್ತು ಕ್ರಿಸ್ಮಸ್ ಆಚರಣೆ ಅವಕಾಶದ ಕುರಿತು ನಾಳೆ (ನ.29) ಸಭೆ ನಡೆಯಲಿದೆ. ಆರೋಗ್ಯ ಸಚಿವ ಡಾ ಕೆ ಸುಧಾಕರ್ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ಕೆಲ ಕಠಿಣ ನಿಯಮಗಳು ಹೊರ ಬೀಳುವ ಸಾಧ್ಯತೆಯಿದೆ.
ತಾಂತ್ರಿಕ ಸಲಹಾ ಸಮಿತಿಯ ಸಲಹೆ ಮೇರೆಗೆ ನ್ಯೂಇಯರ್ ಮತ್ತು ಕ್ರಿಸ್ಮಸ್ ಆಚರಣೆ ಅವಕಾಶದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಕಳೆದ ಬಾರಿ ಸರ್ಕಾರ ಮಾರ್ಗಸೂಚಿ ಹೊರಡಿಸಿತ್ತು. ಈ ಬಾರಿ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂದು ನಾಳೆ ತಿಳಿಯಲಿದೆ. ಪಬ್ಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸುವ ಸಾಧ್ಯತೆ ಇದೆ. ಸದ್ಯ ರಾಜ್ಯದಲ್ಲಿ ತೀವ್ರ ಸೋಂಕಿನ ಏರಿಕೆ ಇಲ್ಲ. ಇನ್ನೂ ಸಮಯಾವಕಾಶ ಇರುವುದರಿಂದ ಸರ್ಕಾರ ಕಾದು, ನಂತರ ತನ್ನ ನಿರ್ಧಾರ ತಿಳಿಸಬಹುದು.
ಇದನ್ನೂ ಓದಿ
Video: ಗ್ರಾಮ ರಕ್ಷಾ ದಳದ 600 ಹುದ್ದೆಗಳಿಗೆ ನೇಮಕಾತಿ; ಸಾವಿರಾರು ಜನರನ್ನು ನಿಯಂತ್ರಿಸಲಾಗದೆ ಲಾಠಿ ಚಾರ್ಜ್