ಬೆಂಗಳೂರು: ಉಡುಪಿಯಲ್ಲಿ ಶುರುವಾದ ಹಿಜಾಬ್ ವಿವಾದ ಈಗ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈಗ ಹಿಜಾಬ್ ಕೇಸ್ ಹೈಕೋರ್ಟ್ ಅಂಗಳದಲ್ಲಿದೆ. ಇಂದು ಕೂಡ ವಕೀಲರಾದ ದೇವದತ್ ಕಾಮತ್ ಹಿಜಾಬ್ ಪರವಾಗಿ ತಮ್ಮ ವಾದ ಮಂಡಿಸಿದ್ದಾರೆ.
ಇನ್ನು, ಸುಧೀರ್ಘ ವಿಚಾರಣೆ ನಡೆಸಿದ ಸಿಜೆ ರಿತುರಾಜ್ ಅವಸ್ತಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್, ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ನೇತೃತ್ವದ ತ್ರಿಸದಸ್ಯ ಪೀಠ ಈಗ ಮತ್ತೆ ಕೇಸ್ ಮುಂದೂಡಿ ಆದೇಶಿಸಿದೆ. ನಿನ್ನೆ ಕೂಡ ಇವತ್ತಿಗೆ ಮುಂದೂಡಿ ವಿಚಾರಣೆ ನಡೆಸಲಾಗಿತ್ತು. ಇವತ್ತು ಮಧ್ಯಾಹ್ನದಿಂದ ಇಲ್ಲಿಯವರೆಗೆ ಸುದೀರ್ಘ ವಿಚಾರಣೆ ನಡೆದಿದ್ದು, ಮತ್ತೆ ನಾಳೆ ಮಧ್ಯಾಹ್ನ ವಿಚಾರಣೆಯನ್ನ 2.30 ಕ್ಕೆ ಮುಂದೂಡಿ ಹೈಕೋರ್ಟ್ ಆದೇಶಿಸಿದೆ.