ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ಭಾರತಕ್ಕೆ ಜವಾದ್ ಚಂಡಮಾರುತ (Jawad Cyclone) ಅಪ್ಪಳಿಸಲಿದ್ದು, ಆಂಧ್ರಪ್ರದೇಶ, ಒಡಿಶಾ ಕರಾವಳಿ (Odisha Coastal) ಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ಮುನ್ಸೂಚನೆ ನೀಡಲಾಗಿದೆ. ಜವಾದ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸಂಚರಿಸುವ 12 ರೈಲುಗಳ ಸೇವೆಯನ್ನು ರದ್ದು ಮಾಡುವುದಾಗಿ ನೈಋತ್ಯ ರೈಲ್ವೆ ವಲಯ ಮಾಹಿತಿ ನೀಡಿದೆ. ಜವಾದ್ ಚಂಡಮಾರುತದ ಹಿನ್ನೆಲೆಯಲ್ಲಿ ಇಂದಿನಿಂದ ಶನಿವಾರದವರೆಗೆ 12 ರೈಲುಗಳ ಸೇವೆಗಳನ್ನು ರದ್ದುಪಡಿಸಲಾಗಿದೆ.
1. ಶುಕ್ರವಾರ (ಡಿ. 3) ರೈಲು ಸಂಖ್ಯೆ 22883 ಪುರಿ – ಯಶವಂತಪುರ ಗರೀಬ್ ರಥ್ ಎಕ್ಸ್ ಪ್ರೆಸ್.
2. ಶುಕ್ರವಾರ (ಡಿ. 3) ರೈಲು ಸಂಖ್ಯೆ 12245 ಹೌರಾ – ಯಶವಂತಪುರ ದುರೊಂತೋ ಎಕ್ಸ್ ಪ್ರೆಸ್.
3. ಶುಕ್ರವಾರ (ಡಿ. 3) ರೈಲು ಸಂಖ್ಯೆ 22817 ಹೌರಾ – ಮೈಸೂರು ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್.
4. ಶುಕ್ರವಾರ (ಡಿ. 3) ರೈಲು ಸಂಖ್ಯೆ 12863 ಹೌರಾ – ಯಶವಂತಪುರ ಎಕ್ಸ್ ಪ್ರೆಸ್.
5. ಶನಿವಾರ (ಡಿ. 4) ರೈಲು ಸಂಖ್ಯೆ 18463 ಭುವನೇಶ್ವರ – ಕೆಎಸ್ಆರ್ ಬೆಂಗಳೂರು ಪ್ರಶಾಂತಿ ಎಕ್ಸ್ ಪ್ರೆಸ್.
6. ಶುಕ್ರವಾರ (ಡಿ. 3) ರೈಲು ಸಂಖ್ಯೆ 12889 ಟಾಟಾನಗರ – ಯಶವಂತಪುರ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್.
7. ಶನಿವಾರ (ಡಿ. 4) ರೈಲು ಸಂಖ್ಯೆ 18637 ಹಟಿಯಾ – ಬೆಂಗಳೂರು ಕಂಟೋನ್ಮೆಂಟ್ ಎಕ್ಸ್ ಪ್ರೆಸ್.
8. ಇಂದು (ಡಿ. 2) ರೈಲು ಸಂಖ್ಯೆ 12509 ಬೆಂಗಳೂರು ಕಂಟೋನ್ಮೆಂಟ್ – ಗುವಾಹಟಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್.
9: ಶುಕ್ರವಾರ (ಡಿ. 3) ರೈಲು ಸಂಖ್ಯೆ 12246 ಯಶವಂತಪುರ – ಹೌರಾ ದುರಾಂಟೊ ಎಕ್ಸ್ ಪ್ರೆಸ್ ಸೇವೆ.
10: ಶುಕ್ರವಾರ (ಡಿ. 3) ರೈಲು ಸಂಖ್ಯೆ 12246 ಯಶವಂತಪುರ – ಹೌರಾ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್..
11 : ಶುಕ್ರವಾರ (ಡಿ. 3) ರೈಲು ಸಂಖ್ಯೆ 18048 ವಾಸ್ಕೋ-ಡ-ಗಾಮಾ – ಹೌರಾ ಅಮರಾವತಿ ಎಕ್ಸ್ ಪ್ರೆಸ್
12. ಶುಕ್ರವಾರ (ಡಿ. 3) ರೈಲು ಸಂಖ್ಯೆ 18464 ಕೆಎಸ್ಆರ್ ಬೆಂಗಳೂರು – ಭುವನೇಶ್ವರ ಪ್ರಶಾಂತಿ ಎಕ್ಸ್ ಪ್ರೆಸ್.
ಈ 12 ರೈಲು ಸೇವಗಳನ್ನು ರದ್ದುಗೊಳಿಸಿ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.
ಜವಾದ್ ಪ್ರಭಾವದಿಂದ ಡಿಸೆಂಬರ್ 4 ಮತ್ತು 5ರಂದು ಆಂಧ್ರ ಮತ್ತು ಒಡಿಶಾದಲ್ಲಿ ಭಾರಿ ಮಳೆಯಾಗಲಿದೆ. ಅದನ್ನು ಹೊರತುಪಡಿಸಿ ಪಶ್ಚಿಮ ಬಂಗಾಳದ ದಕ್ಷಿಣ ಜಿಲ್ಲೆಗಳಾದ ಕೋಲ್ಕತ್ತ, ದಕ್ಷಿಣ ಮತ್ತು ಉತ್ತರ 24 ಪರಗಣ ಜಿಲ್ಲೆಗಳು, ಮಿಡ್ನಾಪುರದ ಪೂರ್ವ ಮತ್ತು ಪಶ್ಚಿಮ ಪ್ರದೇಶಗಳು, ಹೂಗ್ಲಿ, ನಾದಿಯಾ ಮತ್ತು ಝಾರ್ಗ್ರಾಮ್ಗಳಲ್ಲಿ ವಿಪರೀತ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ, ಜವಾದ್ ಚಂಡಮಾರುತದ ಭೀತಿ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಆವರಿಸಿದೆ. ಜವಾದ್ ಚಂಡಮಾರುತದಿಂದಾಗಿ ಆಂಧ್ರಪ್ರದೇಶ , ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಪ್ರತಿಕೂಲ ಹವಾಮಾನದ ಸಾಧ್ಯತೆಯಿದೆ. ಈ ರಾಜ್ಯಗಳಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.