gudibande police: ಆರೋಪಿ ವ್ಯಕ್ತಿಯ ಹೊಟ್ಟೆಗೆ ಪೊಲೀಸರ ಕೈ ತಗುಲಿದಾಗ ಅಲ್ಲಿ ಚಾಕು ಇರುವುದು ಪತ್ತೆಯಾಗಿದೆ. ತಕ್ಷಣ ಚಾಕು ಹೊಂದಿದ್ದ ವ್ಯಕ್ತಿಯನ್ನು ಗುಡಿಬಂಡೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂತರ ಆರೋಗ್ಯ ಸಚಿವ ಡಾ ಕೆ. ಸುಧಾಕರ್ ಕಾರು ಹತ್ತಿ ಬೆಂಗಳೂರಿನತ್ತ ಹೊರಟಿದ್ದಾರೆ.

ಆರೋಗ್ಯ ಸಚಿವ ಸುಧಾಕರ್ ಕಾರ್ಯಕ್ರಮದಲ್ಲಿ ಚಾಕು ಹೊಂದಿದ್ದ ವ್ಯಕ್ತಿಯ ವಶಕ್ಕೆ ಪಡೆದ ಪೊಲೀಸರು
ಚಿಕ್ಕಬಳ್ಳಾಪುರ: ಆರೋಗ್ಯ ಸಚಿವ ಡಾ ಕೆ. ಸುಧಾಕರ್ (Dr K Sudhakar) ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಚಾಕು ಹೊಂದಿದ್ದ ವ್ಯಕ್ತಿಯೊಬ್ಬನನ್ನು ಚಿಕ್ಕಬಳ್ಳಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಜ್ವಾಲ ಭಾರತ ಉಜ್ವಾಲ ಭವಿಷ್ಯ ಕಾರ್ಯಕ್ರಮ ನಿಮಿತ್ತ ಸಚಿವ ಸುಧಾಕರ್ ತೆರೆಳಿದ್ದರು. ಕಾರ್ಯಕ್ರಮ ಮುಗಿಸಿ ಹೊರಡುತ್ತಿದ್ದಾಗ ವ್ಯಕ್ತಿ ಚಾಕು ಹೊಂದಿರುವುದು ಬೆಳಕಿಗೆ ಪೊಲೀಸರ ಗಮನಕ್ಕೆ ಬಂದಿದೆ. ಸಚಿವರು ಸಾರ್ವಜನಿಕರ ಜೊತೆ ಮಾತನಾಡುತ್ತಿದ್ದಾಗ ಪೊಲೀಸರು ಜನರನ್ನು ಹಿಂದಕ್ಕೆ ತಳ್ಳುತ್ತಿದ್ದರು.
ಆ ವೇಳೆ, ಪೊಲೀಸರ ಕೈ ಸದರಿ ವ್ಯಕ್ತಿಯ ಹೊಟ್ಟೆಗೆ ತಗುಲಿದಾಗ ಅಲ್ಲಿ ಚಾಕು ಇರುವುದು ಪತ್ತೆಯಾಗಿದೆ. ತಕ್ಷಣ ಚಾಕು ಹೊಂದಿದ್ದ ವ್ಯಕ್ತಿಯನ್ನು ಗುಡಿಬಂಡೆ ಪೊಲೀಸರು (gudibande police) ವಶಕ್ಕೆ ಪಡೆದಿದ್ದಾರೆ. ನಂತರ ಸಚಿವರು ಕಾರು ಹತ್ತಿ ಬೆಂಗಳೂರಿನತ್ತ ಹೊರಟಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ನಡೆದಿದೆ.