ಯುವಕರು ಬಿಜೆಪಿಯ ದುರುದ್ದೇಶಪೂರಿತ ಹಿಂದುತ್ವಕ್ಕೆ ಬಲಿಯಾಗ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ಸಿದ್ದರಾಮಯ್ಯ
ಉಡುಪಿ: ಯುವಕರು ಬಿಜೆಪಿ (BJP) ಯ ದುರುದ್ದೇಶಪೂರಿತ ಹಿಂದುತ್ವಕ್ಕೆ ಬಲಿಯಾಗ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು. ಉಡುಪಿಯಲ್ಲಿ ಇಂದು (ಜ.22) ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಅವರು ಮಾತನಾಡಿ, ಬಿಜೆಪಿಯವರು ಹಿಂದೂ ಪರ ಇಲ್ಲ, ಹಿಂದುತ್ವದ ಪರವಾಗಿರುವವರು. ನಾನು, ಡಿಕೆಶಿ, ಹರಿಪ್ರಸಾದ್, ವೀರಪ್ಪ ಮೊಯ್ಲಿ ಹಿಂದುತ್ವವಾದಿಗಳಲ್ವಾ ಎಂದು ಪ್ರಶ್ನಿಸಿದರು. ಹಿಂದೂಗಳ ಪರವಾಗಿರುವವರು ಅಂದ್ರೆ ಮನುಷ್ಯತ್ವದ ಪರ ಇರುವವರು. ಕರಾವಳಿ ಭಾಗದಲ್ಲಿ ಕೊಲೆಯಾದವರು ಹಿಂದುಳಿದ ಜಾತಿಯವರು. ಆರ್ಎಸ್ಎಸ್, ಶಾಸಕರ ಮಗ ಕೊಲೆಯಾದ ನಿದರ್ಶನ ಇದೆಯಾ? ಕೊಲೆಯಾದರೆ ಹೆಣಗಳ ಮೇಲೆ ರಾಜಕೀಯ ಮಾಡ್ತಾರೆ ಎಂದು ಕಿಡಿಕಾರಿದರು.
ನಳಿನ್ ಕುಮಾರ್ ಕಟೀಲು ನಾಲಾಯಕ್
ನಳಿನ್ ಕುಮಾರ್ ಕಟೀಲು ಬಿಜೆಪಿ ಅಧ್ಯಕ್ಷನಾಗಲು ನಾಲಾಯಕ್. ರಸ್ತೆ, ಚರಂಡಿ ಸಮಸ್ಯೆ ಬಗ್ಗೆ ಮಾತಾಡಬೇಡಿ ಎಂದು ಕಟೀಲು ಹೇಳ್ತಾರೆ. ದಯವಿಟ್ಟು ಬಿಜೆಪಿಯವರ ಮಾತಿಗೆ ಮರುಳಾಗಬೇಡಿ. ನರೇಂದ್ರ ಮೋದಿಯಷ್ಟು ಸುಳ್ಳು ಹೇಳಿದ ಪ್ರಧಾನಿ ಯಾರೂ ಇಲ್ಲ. ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದು ಸಾವರ್ಕರ್ ಮಾಸಾಶನ ಪಡೆದಿದ್ದರು. ಕರಾವಳಿಯನ್ನು ಹಿಂದುತ್ವದ ಪ್ರಯೋಗಾಲಯ ಮಾಡಲು ಹೊರಟಿದ್ದಾರೆ. ನಮ್ಮ ವಿರೋಧ ಮನುವಾದಿಗಳಿಗೆ ಹೊರತು ಹಿಂದೂವಾದಿಗೆ ಅಲ್ಲ. ವಿಧಾನಸೌಧದ ಗೋಡೆಗಳು ಲಂಚ ಲಂಚ ಎಂದು ಪಿಸುಗುಡುತ್ತಿವೆ ಎಂದು ಸಿದ್ಧರಾಮಯ್ಯ ವಾಗ್ದಾಳಿ ಮಾಡಿದರು.