Karnataka Election 2023: ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುವ ವಿಚಾರದಲ್ಲಿ ವ್ಯಾಪಾಕ ಚರ್ಚೆ ನಡೆಯುತ್ತಲೇ ಇದೆ. ಸಿದ್ದರಾಮಯ್ಯ ಅವರು ಕೋಲಾದಿಂದ ಸ್ಪರ್ಧಿಸುವ ಬಗ್ಗೆ ಹೇಳಿದ್ದಾರೆ. ಆದರೆ ಸಿದ್ದು ಮೈಸೂರಿನಿಂದ ಸ್ಪರ್ಧಿಸಲು ಯತ್ನಿಸುತ್ತಿದ್ದಾರೆ ಎಂದು ಬಿಎಸ್ವೈ ಹೇಳಿದ್ದಾರೆ.

ಸಿದ್ದರಾಮಯ್ಯ ಮತ್ತು ಬಿ.ಎಸ್.ಯಡಿಯೂರಪ್ಪ
ಬೆಳಗಾವಿ: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಸಿದ್ದರಾಮಯ್ಯ (Siddaramaiah) ಅವರು ಕ್ಷೇತ್ರ ಆಯ್ಕೆ ವಿಚಾರದಲ್ಲಿ ಕದಡಿದ ಮನಸ್ಥಿತಿಯನ್ನು ಹೊಂದಿದ್ದಾರೆ. ಕೋಲಾರ, ಬಾದಮಿ ಸೇರಿದಂತೆ ಅನೇಕ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸುತ್ತಿದ್ದಾರೆ. ಇನ್ನೊಂದೆಡೆ ವಿರೋಧಿ ಪಕ್ಷಗಳು ಸಿದ್ದು ಸೋಲಿಸಲು ತಂತ್ರ-ಪ್ರತಿತಂತ್ರ ರೂಪಿಸುತ್ತಿದ್ದಾರೆ. ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಅವರನ್ನು ಮನೆಗೆ ಕಳುಹಿಸುವ ಯೋಜನೆ ರೂಪಿಸುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ಸಿದ್ದರಾಮಯ್ಯ ಅವರು ಹೈಕಮಾಂಡ್ ಒಪ್ಪಿದರೆ ಕೋಲಾರದಿಂದಲೇ (Kolar) ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುತ್ತಿಲ್ಲ, ಅವರ ಕಣ್ಣು ಮೈಸೂರಿನ ಮೇಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (B.S.Yediyurappa) ಅವರು ಹೊಸ ಬಾಂಬ್ ಸಿಡಿಸಿದ್ದು, ಇದು ಕರ್ನಾಟಕ ರಾಜಕೀಯದಲ್ಲಿ ಮತ್ತೆ ಸಿದ್ದರಾಮಯ್ಯ ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಕುತೂಹಲ ಕೆರಳಿಸಿದಂತಾಗಿದೆ.
ಹೌದು, ಬೆಳಗಾವಿ ಜಿಲ್ಲೆಯಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಯಾವ ಕಾರಣಕ್ಕೂ ಕೋಲಾರದಿಂದ ಸಿದ್ದರಾಮಯ್ಯ ನಿಲ್ಲುವುದಿಲ್ಲ ಎಂಬ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಆದರೆ ನಾನು ಭವಿಷ್ಯ ಹೇಳುತ್ತಿಲ್ಲ, ಅವರು ಕೋಲಾರದಿಂದ ನಿಲ್ಲುವುದಿಲ್ಲ. ಡ್ರಾಮಾ ಮಾಡುತ್ತಿದ್ದಾರೆ, ಕೋಲಾರದಲ್ಲಿ ನಿಂತುಕೊಂಡರೆ ಅವರು ಮನೆಗೆ ಹೋಗುವುದು ನಿಶ್ಚಿತ ಎಂದು ಅರಿತು ಮೈಸೂರಿಗೆ ಬರಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿ