ಐವರು IPS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ಪೊಲೀಸ್
ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದಂತೆ ಕರ್ನಾಟಕ ಸರ್ಕಾರ (Karnataka Government) ಪೊಲೀಸ್ ಇಲಾಖೆಯಲ್ಲಿ (Police Department) ಮೇಜರ್ ಸರ್ಜರಿಯನ್ನು ಮಾಡುತ್ತಿದೆ. ಉನ್ನತ ಉದ್ದೆಯಲ್ಲಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದೆ. ಈ ಹಿಂದೆ ನೂರಾರು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿತ್ತು. ಈ ನಂತರ ನಾಲ್ಕು ದಿನಗಳ ಹಿಂದೆ ಸಿವಿಲ್ ಡಿವೈಎಸ್ಪಿಗಳುಗಳನ್ನು ಮತ್ತು ಸಿವಿಲ್ ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿತ್ತು. ಇದೀಗ ಮತ್ತೆ ಐವರು ಐಪಿಎಸ್ (IPS) ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
- ಆರ್.ಚೇತನ್, ಎಸ್ಪಿ, ರಾಜ್ಯ ಗುಪ್ತಚರ ಇಲಾಖೆ, ಬೆಂಗಳೂರು
- ಸೀಮಾ ಲಾಟ್ಕರ್, ಪೊಲೀಸ್ ವರಿಷ್ಠಾಧಿಕಾರಿ, ಮೈಸೂರು
- ಶಿವಪ್ರಕಾಶ್ ದೇವರಾಜ್, ಎಐಜಿಪಿ, ಸಿಸಿಬಿ, ಬೆಂಗಳೂರು
- ಎಂ.ಮುತ್ತುರಾಜ್, ಮೈಸೂರು ಡಿಸಿಪಿ, ಕಾನೂನು ಸುವ್ಯವಸ್ಥೆ
- ಬಾಬಾಸಾಬ್ ನೇಮಗೌಡ, ಪೊಲೀಸ್ ವರಿಷ್ಠಾಧಿಕಾರಿ, ಗದಗ