KSRTC ಬಸ್, ಬೈಕ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಯುವಕರು ಸಾವು


ಶಿವಮೊಗ್ಗ: ಕೆಎಸ್ಆರ್​​ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾಚೇನಹಳ್ಳಿಯ ಡೈರಿ ಸಮೀಪ ನಡೆದಿದೆ.

ಜಯಂತಿ ಗ್ರಾಮದ ಅಂಥೋಣಿ(34) , ಮಂಜುನಾಥ್ (28) ಮೃತ ದುರ್ದೈವಿಗಳು. ಶಿವಮೊಗ್ಗದಿಂದ ಬೆಂಗಳೂರಿಗೆ ಕೆಎಸ್ಆರ್ಟಿಸಿ ಬಸ್ ತೆರಳುತ್ತಿತ್ತು ಎನ್ನಲಾಗಿದ್ದು ಎರಡು ವಾಹನಗಳ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಪ್ರಕರಣ ಕುರಿತು ಭದ್ರಾವತಿ ಸಂಚಾರ ನಿಯಂತ್ರಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News First Live Kannada


Leave a Reply

Your email address will not be published. Required fields are marked *