Mandya News: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ, ಕೊಲೆಯಲ್ಲಿ ಅಂತ್ಯ | Kannada News | Mandya Quarrel between friends over a trivial cause, ending in murder


ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ, ತೀವ್ರ ಹಲ್ಲೆಗೊಳಗಾಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಬೋರಾಪುರದ ಬಳಿ ನಡೆದಿದೆ. ಪುನೀತ್​ ಮೃತ ರ್ದುದೈವಿ.

ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ, ತೀವ್ರ ಹಲ್ಲೆಗೊಳಗಾಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮದ್ದೂರು (Maddur) ತಾಲೂಕಿನ ಬೋರಾಪುರದ ಬಳಿ ನಡೆದಿದೆ. ಪುನೀತ್​ ಮೃತ ರ್ದುದೈವಿ. ಹೌದು ಹಣದ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳವಾಗಿ ಚಿಕ್ಕರಸಿನಕೆರೆ ಗ್ರಾಮದ ನಿವಾಸಿ ಪುನೀತ್ ಮೇಲೆ ಸ್ನೇಹಿತರು ತೀವ್ರ ಹಲ್ಲೆ ನಡೆಸಿದ್ದರು. ಈ ವೇಳೆ ಆತನ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಬಳಿಕ ಆತನನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಪುನೀತ್ ಮೈಸೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ಕುರಿತು ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನ ಹತ್ಯೆ

ಬೆಂಗಳೂರಿನ ಮಹದೇವಪುರದಲ್ಲಿ ತಡರಾತ್ರಿ ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನನ್ನ ಹತ್ಯೆ ಮಾಡಲಾಗಿದೆ. ರೇಣುಕುಮಾರ್​(24) ಹತ್ಯೆಯಾದ ಯುವಕ. ಏರಿಯಾದಲ್ಲಿ ನಿಂದು ಜಾಸ್ತಿ ಆಗಿದೆ ಎಂದು ಮೃತ ಯುವಕನ ಜೊತೆ ಜಗಳಕ್ಕೆ ಇಳಿದಿದ್ದಾರೆ. ಈ ವೇಳೆ ಚಾಕುವಿನಿಂದ ಪ್ರಶಾಂತ್, ಶ್ರೀಕಾಂತ್, ವಸಂತ್​ ಕುಮಾರ್ ಎಂಬುವವರು ಇರಿದಿದ್ದು, ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TV9 Kannada


Leave a Reply

Your email address will not be published. Required fields are marked *