ಬೆಂಗಳೂರು: ಬ್ರ್ಯಾಂಚ್ ಮ್ಯಾನೇಜರ್ಗೆ ಚಾಕು ತೋರಿಸಿದ ಖದೀಮ ಬರೋಬ್ಬರಿ 4 ಲಕ್ಷ ನಗದು ಹಾಗೂ ಚಿನ್ನಾಭರಣಗಳನ್ನು ಲೂಟಿ ಮಾಡಿ ಪರಾರಿಯಾದ ಘಟನೆ ನಗರದ ಮಡಿವಾಳ ಎಸ್ಬಿಐ ಬ್ಯಾಂಕ್ನಲ್ಲಿ ನಡೆದಿದೆ.
ಇಂದು ಸಂಜೆ ಆರು ಗಂಟೆಯ ಹೊತ್ತಿಗೆ ಬ್ಯಾಂಕ್ಗೆ ನುಗ್ಗಿದ ಖದೀಮ ಬ್ರ್ಯಾಂಚ್ ಮ್ಯಾನೇಜರ್ ಗೆ ಚಾಕು ತೋರಿಸಿ ಹೆದರಿಸಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಹಣ ಮತ್ತು 100 ಗ್ರಾಂ ನಷ್ಟು ಚಿನ್ನಾಭರಣಗಳನ್ನು ಹೊತ್ತೊಯ್ದಿದ್ದಾನೆ. ಈ ಬ್ಯಾಂಕ್ನಲ್ಲಿ ಕೇವಲ ಇಬ್ಬರೆ ಕೆಲಸ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಖದೀಮ ಏಕಾಂಗಿಯಾಗಿ ಬಂದು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಸದ್ಯ ಸ್ಥಳಕ್ಕೆ ಮಡಿವಾಳ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಸಿಬ್ಬಂದಿ ಬಳಿ ಘಟನೆಯ ಮಾಹಿತಿ ಪಡೆದು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.