Bharat Jodo Yatra ಕಾಶ್ಮೀರಿ ಪಂಡಿತರ ನಿಯೋಗ ಇಂದು ನನ್ನನ್ನು ಭೇಟಿ ಮಾಡಿದೆ. ಅವರು ನನಗೆ ಹೇಳಿದ ಮಾತುಗಳಿಂದ ನನಗೆ ಆಘಾತವಾಯಿತು. ನೀವು ಬೇಡಿಕೊಳ್ಳುವುದೇನೂ ಬೇಡ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದರು ಎಂದು ಅವರು ಹೇಳಿದ್ದಾರೆ. ಇದು ಭಯಾನಕವಾಗಿದೆ. ಅವರು ಈ ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ನಾನು ಎಲ್ಜಿಗೆ ಹೇಳಲು ಬಯಸುತ್ತೇನೆ ಎಂದು ಸೋಮವಾರ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಹೇಳಿದ್ದಾರೆ.

ರಾಹುಲ್ ಗಾಂಧಿ
ಜಮ್ಮು ಮತ್ತು ಕಾಶ್ಮೀರಕ್ಕೆ (Jammu and kashmir) ರಾಜ್ಯ ಸ್ಥಾನಮಾನ ಕೊಡಿಸಲು ಕಾಂಗ್ರೆಸ್ ಶ್ರಮಿಸುತ್ತದೆ ಎಂದು ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ. ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ (Bharat Jodo Yatra) ಕೊನೆಯ ಹಂತದಲ್ಲಿ ಜಮ್ಮು ಕಾಶ್ಮೀರದಲ್ಲಿ ಮಾತನಾಡುತ್ತಿದ್ದರವರು. 2019ರಲ್ಲಿ ಕೇಂದ್ರ ಸರ್ಕಾರವು ಆರ್ಟಿಕಲ್ 370 ಅನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರ ಮೊದಲ ಬಾರಿಗೆ ಚುನಾವಣೆ ನಡೆಸಲು ಸಜ್ಜಾಗುತ್ತಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಕಾಶ್ಮೀರಿ ಪಂಡಿತರೊಂದಿಗೆ ಊಟ ಮಾಡುತ್ತಿರುವ ವಿಡಿಯೊವನ್ನು ಕಾಂಗ್ರೆಸ್ ಟ್ವೀಟ್ ಮಾಡಿದೆ. ಜಮ್ಮು ಮತ್ತು ಕಾಶ್ಮೀರ ರಾಜ್ಯ ಸ್ಥಾನಮಾನದ ವಿಷಯವಾಗಿ ವಿರೋಧ ಪಕ್ಷಗಳು ಪದೇ ಪದೇ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಬರುತ್ತಿವೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ಆಡಳಿತ ಪಕ್ಷದ ನಾಯಕರು ಹೇಳಿದ್ದಾರೆ.
ಕಾಶ್ಮೀರಿ ಪಂಡಿತರ ನಿಯೋಗ ಇಂದು ನನ್ನನ್ನು ಭೇಟಿ ಮಾಡಿದೆ. ಅವರು ನನಗೆ ಹೇಳಿದ ಮಾತುಗಳಿಂದ ನನಗೆ ಆಘಾತವಾಯಿತು. ನೀವು ಬೇಡಿಕೊಳ್ಳುವುದೇನೂ ಬೇಡ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದರು ಎಂದು ಅವರು ಹೇಳಿದ್ದಾರೆ. ಇದು ಭಯಾನಕವಾಗಿದೆ. ಅವರು ಈ ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ನಾನು ಎಲ್ಜಿಗೆ ಹೇಳಲು ಬಯಸುತ್ತೇನೆ ಎಂದು ಸೋಮವಾರ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಹೇಳಿದ್ದಾರೆ.
ತಾಜಾ ಸುದ್ದಿ
ಇಂದು, ರಾಹುಲ್ ಗಾಂಧಿಯವರು ಕಾಶ್ಮೀರಿ ಪಂಡಿತರ ನಿಯೋಗವನ್ನು ಭೇಟಿ ಮಾಡಿದರು. ಅವರು ಕಾಶ್ಮೀರಿ ಪಂಡಿತರ ಉದ್ದೇಶಿತ ಹತ್ಯೆಗಳನ್ನು ಪ್ರತಿಭಟಿಸುತ್ತಿರುವುದರಿಂದ ಅವರು ಸುಮಾರು 6 ತಿಂಗಳಿನಿಂದ ರಾಜ್ಯ ಸರ್ಕಾರದಿಂದ ಯಾವುದೇ ಸಂಬಳವನ್ನು ಪಡೆದಿಲ್ಲ ಎಂಬುದನ್ನು ಅವರು ಹೇಳಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.